ಬೆಂಗಳೂರು: ರಾಮನಗರದ ಹೆಸರು ಬದಲಾಯಿಸುವ ಬಿಜೆಪಿ ಸರ್ಕಾರದ ನಿರ್ಧಾರದ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಪಕ್ಕದಲ್ಲೇ ಕಾವೇರಿ ನದಿ ಇದೆ. ಇಗ್ಗಲೂರಿನಲ್ಲಿ 'ದೇವೇಗೌಡ ಬ್ಯಾರೇಜ್' ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ. ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ. ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಹೇಳಿದ್ದಾರೆ.
ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ 'ದೇವೇಗೌಡ ಬ್ಯಾರೇಜ್' ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ.ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ.#SaveRamanagara
— H D Kumaraswamy (@hd_kumaraswamy) January 5, 2020
1/10
ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ ಜಿಲ್ಲೆಗೆ ನಾನು ನನ್ನ ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನರ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದು #SaveRamanagara ಹ್ಯಾಷ್ಟ್ಯಾಗ್ನೊಂದಿಗೆ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.
ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನೂ ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪ.#SaveRamanagara
— H D Kumaraswamy (@hd_kumaraswamy) January 5, 2020
3/10
ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಇನ್ನು ಮುಂದಕ್ಕೆ ಊರು ಬೆಳೆಯಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪವಾಗಿದೆ. ಅಭಿವೃದ್ಧಿ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರುವುದೂ ಬೇಡ. ಭೂಮಿ ಲೂಟಿಯಾಗದಿರಲಿ. ಕೆರೆಗಳು ಮುಚ್ಚದೆ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೆ ಇರಲಿ ಎಂದು ಹೇಳಿದ್ದಾರೆ.
ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ?#SaveRamanagara
— H D Kumaraswamy (@hd_kumaraswamy) January 5, 2020
5/10
ಮತ್ತೊಂದು ಟ್ವೀಟ್ನಲ್ಲಿ, ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್ಗಳಿಗೆ ಬಲಿಯಾಗಿ ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ. ರಾಮನಗರ ತಾಲೂಕು ಮೊದಲು 'ಕ್ಲೋಸ್ ಪೇಟೆ' ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ ಎಂದಿದ್ದಾರೆ.
ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ.#SaveRamanagara
— H D Kumaraswamy (@hd_kumaraswamy) January 5, 2020
9/10
ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ. ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ. ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.#SaveRamanagara
— H D Kumaraswamy (@hd_kumaraswamy) January 5, 2020
10/10
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.