ರಾಮನಗರ: ಚಿತ್ರನಟ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ರೇವತಿ ಅವರ ವಿವಾಹವು ಕೇತಗಾನಹಳ್ಳಿಯ ಫಾರ್ಮ್ ಹೌಸ್ನಲ್ಲಿ ಶುಕ್ರವಾರ ಬೆಳಗ್ಗೆ ನೆರವೇರಿತು.
ಮನೆಯ ಮುಂಭಾಗ ಮದುವೆಗೆಂದೇ ವಿಶೇಷವಾಗಿ ಮಂಟಪ ನಿರ್ಮಿಸಲಾಗಿತ್ತು.
ಕುಟುಂಬದ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಚನ್ನಮ್ಮ ದಂಪತಿ ಧಾರೆ ಕಾರ್ಯ ನಡೆಸಿಕೊಟ್ಟರು.
ಕುಮಾರಸ್ವಾಮಿ-ಅನಿತಾ, ಅವರ ಬೀಗರಾದ ಮಂಜುನಾಥ ದಂಪತಿ ಹಾಗೂ ಎರಡೂ ಕುಟುಂಬದ ಆಪ್ತರಷ್ಟೇ ಪಾಲ್ಗೊಂಡರು. ಒಟ್ಟು 42 ವಾಹನಗಳ ಓಡಾಟಕ್ಕೆ ಪೊಲೀಸರು ಅನುಮತಿ ನೀಡಿದ್ದರು.
ಶಾಸಕ ಎಚ್.ಡಿ. ರೇವಣ್ಣ, ಭವಾನಿ ದಂಪತಿ, ಸಂಸದ ಪ್ರಜ್ವಲ್ ರೇವಣ್ಣ ಸಹ ಪಾಲ್ಗೊಂಡರು.
ನಿಖಿಲ್ ಹಾಗೂ ರೇವತಿ ಅವರ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಫೆಬ್ರುವರಿ 10ರಂದು ಅದ್ಧೂರಿಯಾಗಿ ನಡೆದಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.