ವಸತಿ ಸಚಿವ ವಿ.ಸೋಮಣ್ಣ, ‘ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ವಿಜ್ಞಾನಿಗಳು ಹಾಗೂ ವಿಷಯ ತಜ್ಞರು ಪ್ರಾಕೃತಿಕ ವಿಕೋಪಕ್ಕೆ ಕಾರಣಗಳು ಹಾಗೂ ವಾಯು ಮಾಲಿನ್ಯದಿಂದ ಎದುರಾಗುವ ಸವಾಲುಗಳ ಬಗ್ಗೆ ಪುಸ್ತಕಗಳನ್ನು ರಚಿಸಿ, ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು’ ಎಂದು ಹೇಳಿದರು.