ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ತಮ್ಮ ಸ್ವಾರ್ಥ ಸಾಧನೆಗಾಗಿ ದೇಶವನ್ನೇ ಬಲಿ ಕೊಡುತ್ತಿದ್ದಾರೆ. ಇಂಥವರಿಂದ ಅಭಿವೃದ್ಧಿ ಬಯಸುವುದು ಕನಸಿನ ಮಾತು. ದೇಶದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅತ್ತ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಅದೇ ರೀತಿಯಲ್ಲಿ ಭಾರತವನ್ನು ಮೂದಲಿಸುತ್ತಾರೆ’ ಎಂದು ಹೇಳಿದರು.