<p><strong>ಹುಬ್ಬಳ್ಳಿ</strong>: ‘ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಕೊಡಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಗೊತ್ತಿದೆ. ಅವರಿಗೆ ಅಂಥ ಪರಮಾಧಿಕಾರ ಇದೆ. ಅವರನ್ನು ಒತ್ತಾಯಿಸುವ ಕೆಲಸ ಯಾವುದೇ ಮಠಾಧೀಶರು ಮಾಡುವುದು ಒಳ್ಳೆಯದಲ್ಲ’ ಎಂದು ಬಾಳೆಹೊನ್ನೂರು ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಕಿವಿ ಮಾತು ಹೇಳಿದರು.</p>.<p>ನಗರದಲ್ಲಿ ಜ.16ರಿಂದ ಪ್ರಾರಂಭಗೊಳ್ಳಲಿರುವ ಶಿವಾಚಾರ್ಯ ಸಂಸ್ಕೃತಿ ಪುನಶ್ಚೇತನ ಚಿಂತನ ಸಮಾವೇಶದಲ್ಲಿ ಪಾಲ್ಗೊಳ್ಳಲು ಬುಧವಾರ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>‘ಕಾವಿಧಾರಿಗಳಾದವರು ಧರ್ಮ ಸಂಸ್ಕೃತಿ ಆದರ್ಶಗಳನ್ನು ಬೆಳೆಸುವ ಕೆಲಸ ಮಾಡುವುದು ಒಳಿತು’ ಎಂದು ಸಲಹೆ ನೀಡಿದರು.</p>.<p>ಯಡಿಯೂರಪ್ಪ ಅವರು ಜನ ನಾಯಕರಿದ್ದಾರೆ. ಅವರು ಎಲ್ಲ ವರ್ಗದ ಜನರ ಹಿತ ಮತ್ತು ಬೆಳವಣಿಗೆಯ ಗುರಿಯೊಂದಿಗೆ ಶ್ರಮಿಸುತ್ತಿದ್ದಾರೆ ಎಂದರು.</p>.<p>ಎಲ್ಲ ರಂಗಗಳಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಧರ್ಮ, ಸಂಸ್ಕೃತಿ, ಆದರ್ಶ ಮೌಲ್ಯಗಳ ಪುನರುತ್ಥಾನಗೊಳಿಸಬೇಕಾದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.</p>.<p>ಸಕಲರಿಗೂ ಹಿತವನ್ನು ಬಯಸಿದ ವೀರಶೈವ ಧರ್ಮದಲ್ಲಿ ಉದಾತ್ತ ಮೌಲ್ಯಗಳನ್ನು ಕಾಣುತ್ತೇವೆ. ಒಂದು ಧರ್ಮದ ಬಗ್ಗೆ ಹೇಳುವುದು ಬಲು ಸುಲಭ. ಆದರೆ, ಆಚರಿಸಿಕೊಂಡು ಬರುವುದು ಅಷ್ಟು ಸುಲಭವಲ್ಲ ಎಂದರು.</p>.<p>ಮನುಷ್ಯ ಭೌತಿಕವಾಗಿ ಸಂಪತ್ತು, ಅಧಿಕಾರ ಗಳಿಸಿದ್ದರೂ ಸಂಸ್ಕಾರದ ಕೊರತೆ ಬಹಳಷ್ಟಿದೆ. ಸಂಸ್ಕಾರ, ಸಂಸ್ಕೃತಿ ಇಲ್ಲದ ಕಾರಣ ಕೆಲವರಿಂದ ಅವಘಡಗಳು ಸಂಭವಿಸುತ್ತವೆ. ಈ ನಾಡಿನ ಮಠಾಧೀಶರ ಮೇಲೆ ಬಹಳಷ್ಟು ಜವಾಬ್ದಾರಿಯಿದೆ. ಅದನ್ನು ಅರಿತು ಆಚರಿಸಿ ಬಾಳಿದಾಗ ಸಮಾಜದ ಎಲ್ಲ ರಂಗಗಳಲ್ಲಿ ಉತ್ತಮ ವಾತಾವರಣ ನಿರ್ಮಾಣಗೊಳ್ಳಲು ಸಾಧ್ಯ ಎಂದು ಹೇಳಿದರು.</p>.<p>ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಜನವರಿ 16, 17 ಮತ್ತು 18 ರಂದು ಮೂರು ದಿನಗಳ ಕಾಲ ಚಿಂತನ ಸಮಾವೇಶ ಜರುಗಲಿದೆ ಎಂದು ಸ್ಚಾಮೀಜಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಸಂಪುಟದಲ್ಲಿ ಯಾರಿಗೆ ಮಂತ್ರಿ ಸ್ಥಾನ ಕೊಡಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಗೊತ್ತಿದೆ. ಅವರಿಗೆ ಅಂಥ ಪರಮಾಧಿಕಾರ ಇದೆ. ಅವರನ್ನು ಒತ್ತಾಯಿಸುವ ಕೆಲಸ ಯಾವುದೇ ಮಠಾಧೀಶರು ಮಾಡುವುದು ಒಳ್ಳೆಯದಲ್ಲ’ ಎಂದು ಬಾಳೆಹೊನ್ನೂರು ರಂಭಾಪುರಿ ವೀರಸೋಮೇಶ್ವರ ಸ್ವಾಮೀಜಿ ಕಿವಿ ಮಾತು ಹೇಳಿದರು.</p>.<p>ನಗರದಲ್ಲಿ ಜ.16ರಿಂದ ಪ್ರಾರಂಭಗೊಳ್ಳಲಿರುವ ಶಿವಾಚಾರ್ಯ ಸಂಸ್ಕೃತಿ ಪುನಶ್ಚೇತನ ಚಿಂತನ ಸಮಾವೇಶದಲ್ಲಿ ಪಾಲ್ಗೊಳ್ಳಲು ಬುಧವಾರ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>‘ಕಾವಿಧಾರಿಗಳಾದವರು ಧರ್ಮ ಸಂಸ್ಕೃತಿ ಆದರ್ಶಗಳನ್ನು ಬೆಳೆಸುವ ಕೆಲಸ ಮಾಡುವುದು ಒಳಿತು’ ಎಂದು ಸಲಹೆ ನೀಡಿದರು.</p>.<p>ಯಡಿಯೂರಪ್ಪ ಅವರು ಜನ ನಾಯಕರಿದ್ದಾರೆ. ಅವರು ಎಲ್ಲ ವರ್ಗದ ಜನರ ಹಿತ ಮತ್ತು ಬೆಳವಣಿಗೆಯ ಗುರಿಯೊಂದಿಗೆ ಶ್ರಮಿಸುತ್ತಿದ್ದಾರೆ ಎಂದರು.</p>.<p>ಎಲ್ಲ ರಂಗಗಳಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಧರ್ಮ, ಸಂಸ್ಕೃತಿ, ಆದರ್ಶ ಮೌಲ್ಯಗಳ ಪುನರುತ್ಥಾನಗೊಳಿಸಬೇಕಾದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.</p>.<p>ಸಕಲರಿಗೂ ಹಿತವನ್ನು ಬಯಸಿದ ವೀರಶೈವ ಧರ್ಮದಲ್ಲಿ ಉದಾತ್ತ ಮೌಲ್ಯಗಳನ್ನು ಕಾಣುತ್ತೇವೆ. ಒಂದು ಧರ್ಮದ ಬಗ್ಗೆ ಹೇಳುವುದು ಬಲು ಸುಲಭ. ಆದರೆ, ಆಚರಿಸಿಕೊಂಡು ಬರುವುದು ಅಷ್ಟು ಸುಲಭವಲ್ಲ ಎಂದರು.</p>.<p>ಮನುಷ್ಯ ಭೌತಿಕವಾಗಿ ಸಂಪತ್ತು, ಅಧಿಕಾರ ಗಳಿಸಿದ್ದರೂ ಸಂಸ್ಕಾರದ ಕೊರತೆ ಬಹಳಷ್ಟಿದೆ. ಸಂಸ್ಕಾರ, ಸಂಸ್ಕೃತಿ ಇಲ್ಲದ ಕಾರಣ ಕೆಲವರಿಂದ ಅವಘಡಗಳು ಸಂಭವಿಸುತ್ತವೆ. ಈ ನಾಡಿನ ಮಠಾಧೀಶರ ಮೇಲೆ ಬಹಳಷ್ಟು ಜವಾಬ್ದಾರಿಯಿದೆ. ಅದನ್ನು ಅರಿತು ಆಚರಿಸಿ ಬಾಳಿದಾಗ ಸಮಾಜದ ಎಲ್ಲ ರಂಗಗಳಲ್ಲಿ ಉತ್ತಮ ವಾತಾವರಣ ನಿರ್ಮಾಣಗೊಳ್ಳಲು ಸಾಧ್ಯ ಎಂದು ಹೇಳಿದರು.</p>.<p>ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಜನವರಿ 16, 17 ಮತ್ತು 18 ರಂದು ಮೂರು ದಿನಗಳ ಕಾಲ ಚಿಂತನ ಸಮಾವೇಶ ಜರುಗಲಿದೆ ಎಂದು ಸ್ಚಾಮೀಜಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>