‘ಎಂಬತ್ತರ ದಶಕದಲ್ಲಿ ಎಚ್.ಡಿ. ದೇವೇಗೌಡ ಹಾಗೂ ಎಸ್.ಆರ್. ಬೊಮ್ಮಾಯಿ ಕಾಂಗ್ರೆಸ್ ಸೇರುವ ಬಯಕೆ ವ್ಯಕ್ತಪಡಿಸಿದ್ದರು.ಆಟೋರಿಕ್ಷಾದಲ್ಲಿ ನನ್ನ ಮನೆಗೆ ಬಂದಿದ್ದ ಗೌಡರು, ‘ವಿರೋಧ ಪಕ್ಷದಲ್ಲಿ ಒಗ್ಗಟ್ಟಿಲ್ಲ, ಒಂದು ನೀತಿ ಇಲ್ಲ. ನಾನು ಕಾಂಗ್ರೆಸ್ ಸೇರುವ ಮನಸ್ಸು ಮಾಡಿದ್ದೇನೆ’ ಎಂಬುದಾಗಿ ಹೇಳಿದ್ದರು...’ ಎಂದು ಎಸ್.ಎಂ. ಕೃಷ್ಣ ಅವರ ಸಂದರ್ಶನ ಆಧಾರಿತ ಪುಸ್ತಕ ‘ಸ್ಮೃತಿ ವಾಹಿನಿ’ಯಲ್ಲಿ ಉಲ್ಲೇಖವಾಗಿದೆ.