ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಈ ಬಗ್ಗೆ ರಾಜ್ಯದ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಬೇಕು. ಉತ್ತರ ಪ್ರದೇಶದಲ್ಲೂ ಸಹ ಜಿಹಾದಿಗಳು ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟನೆಗಳ ಮೇಲೆ ದಾಳಿ ನಡೆಸುತ್ತಿದ್ದವು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಮಾಜ ವಿರೋಧಿ, ರಾಷ್ಟ್ರವಿರೋಧಿಗಳ ವಿರುದ್ಧ ಕ್ರಮಕೈಗೊಂಡಿದ್ದರಿಂದ ರಾಜ್ಯ ಬಿಟ್ಟು ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದರು.