<p><strong>ಬೆಂಗಳೂರು:</strong> ‘ಹೀರೋನ ವಿಲನ್ ಮಾಡ್ತೀರಿ, ವಿಲನ್ನಹೀರೋ ಮಾಡ್ತೀರಿ’ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.<br /><br />ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು,‘ನನ್ನ ರಾಜೀನಾಮೆ ಬಗ್ಗೆ ಸುದ್ದಿ ಮಾಡುತ್ತಿದ್ದೀರಿ. ನಾಲ್ಕು ದಿನ ಸಮಯ ಕೊಡಿ, ರಾಜೀನಾಮೆ ಯಾವಾಗ ಎಂದುತಿಳಿಸುತ್ತೇನೆ’ ಎಂದು ಹೇಳಿದರು.</p>.<p>‘ನನ್ನ ಜೊತೆ ಇರುವ ಶಾಸಕರ ಬಗ್ಗೆ ನಿಮಗೆ ಏಕೆ ಹೇಳಬೇಕು? ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ’ ಎಂದರು.</p>.<p>‘ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದೇನೆ. ನಿನ್ನೆಯೂ ರಾಜೀನಾಮೆ ಹೇಳಿಕೆ ಕೊಟ್ಟಿದ್ದೆ. ಆದ್ದರಿಂದ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ವೇಣುಗೋಪಾಲ್ ಭೇಟಿ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದರು.</p>.<p><strong>ರಮೇಶ ಜಾರಕಿಹೊಳಿ ಪಕ್ಷ ಬಿಟ್ಟು ಹೋಗಲ್ಲ: ಖರ್ಗೆ<br />ಕಲಬುರ್ಗಿ: </strong>ರಮೇಶ ಜಾರಕಿಹೊಳಿ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ನಗರದ ಇಕ್ಬಾಲ್ ಕಾಲೊನಿಯಲ್ಲಿ ಸ್ಮಶಾನ ಭೂಮಿ ಹಾಗೂ ಹೀರಾಪುರ ಕ್ರಾಸ್ವರೆಗೆ ಸಿ.ಸಿ ರಸ್ತೆ ಮತ್ತು ಒಳಚರಂಡಿ ನಿರ್ಮಾಣ ಕಾಮಗಾರಿಗೆ ಸಂಸದ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಬಲವರ್ಧನೆ ಮಾಡುತ್ತಾರೆ. ರಮೇಶ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದರು.</p>.<p>ಜಾರಕಿಹೋಳಿ ಸಹೋದರರ ಮಧ್ಯೆ ಒಡಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ರಮೇಶ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರನ್ನು ವಿಲನ್ ಅಂತಾ ಯಾರೂ ಟ್ರೀಟ್ ಮಾಡಿಲ್ಲ.</p>.<p>ಪಕ್ಷದಲ್ಲಿನ ಬಿಕ್ಕಟ್ಟು ಶಮನವಾಗುನ ನಂಬಿಕೆ ಇದೆ. ರಾಜ್ಯ ನಾಯಕರು ಬಂಡಾಯ ಶಮನ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಅಸಮಾಧಾನ, ವೈಮನಸ್ಸು ಕೆಲದಿನ ಇರುತ್ತದೆ. ಆ ಬಳಿಕ ಎಲ್ಲವೂ ಸರಿ ಹೋಗುತ್ತದೆ. ಹೀಗಾಗಿ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಪುನರುಚ್ಚರಿಸಿದರು.</p>.<p><strong>ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/ceabinet-expantion-gives-more-596805.html" target="_blank">ಶಮನಗೊಳ್ಳದ ಸಂಪುಟ ಬೇಗುದಿ: ಕಾಂಗ್ರೆಸ್ ನಾಯಕರಲ್ಲಿ ತಳಮಳ</a></strong></p>.<p><strong>*<a href="https://www.prajavani.net/stories/district/bjp-planning-harm-congress-jds-596835.html" target="_blank">ಅತೃಪ್ತರ ಸೆಳೆದು ಸರ್ಕಾರ ಕೆಡವಲು ಬಿಜೆಪಿ ತಂತ್ರ?</a></strong></p>.<p><strong>*<a href="https://www.prajavani.net/stories/stateregional/cabinet-expansion-karnataka-596848.html" target="_blank">ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ತಪ್ಪಲು ನಾವು ಕಾರಣರಲ್ಲ: ಜಿ.ಪರಮೇಶ್ವರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೀರೋನ ವಿಲನ್ ಮಾಡ್ತೀರಿ, ವಿಲನ್ನಹೀರೋ ಮಾಡ್ತೀರಿ’ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.<br /><br />ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು,‘ನನ್ನ ರಾಜೀನಾಮೆ ಬಗ್ಗೆ ಸುದ್ದಿ ಮಾಡುತ್ತಿದ್ದೀರಿ. ನಾಲ್ಕು ದಿನ ಸಮಯ ಕೊಡಿ, ರಾಜೀನಾಮೆ ಯಾವಾಗ ಎಂದುತಿಳಿಸುತ್ತೇನೆ’ ಎಂದು ಹೇಳಿದರು.</p>.<p>‘ನನ್ನ ಜೊತೆ ಇರುವ ಶಾಸಕರ ಬಗ್ಗೆ ನಿಮಗೆ ಏಕೆ ಹೇಳಬೇಕು? ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ’ ಎಂದರು.</p>.<p>‘ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದೇನೆ. ನಿನ್ನೆಯೂ ರಾಜೀನಾಮೆ ಹೇಳಿಕೆ ಕೊಟ್ಟಿದ್ದೆ. ಆದ್ದರಿಂದ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ವೇಣುಗೋಪಾಲ್ ಭೇಟಿ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದರು.</p>.<p><strong>ರಮೇಶ ಜಾರಕಿಹೊಳಿ ಪಕ್ಷ ಬಿಟ್ಟು ಹೋಗಲ್ಲ: ಖರ್ಗೆ<br />ಕಲಬುರ್ಗಿ: </strong>ರಮೇಶ ಜಾರಕಿಹೊಳಿ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ನಂಬಿಕೆ ಇದೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>.<p>ನಗರದ ಇಕ್ಬಾಲ್ ಕಾಲೊನಿಯಲ್ಲಿ ಸ್ಮಶಾನ ಭೂಮಿ ಹಾಗೂ ಹೀರಾಪುರ ಕ್ರಾಸ್ವರೆಗೆ ಸಿ.ಸಿ ರಸ್ತೆ ಮತ್ತು ಒಳಚರಂಡಿ ನಿರ್ಮಾಣ ಕಾಮಗಾರಿಗೆ ಸಂಸದ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಬಲವರ್ಧನೆ ಮಾಡುತ್ತಾರೆ. ರಮೇಶ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದರು.</p>.<p>ಜಾರಕಿಹೋಳಿ ಸಹೋದರರ ಮಧ್ಯೆ ಒಡಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ರಮೇಶ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರನ್ನು ವಿಲನ್ ಅಂತಾ ಯಾರೂ ಟ್ರೀಟ್ ಮಾಡಿಲ್ಲ.</p>.<p>ಪಕ್ಷದಲ್ಲಿನ ಬಿಕ್ಕಟ್ಟು ಶಮನವಾಗುನ ನಂಬಿಕೆ ಇದೆ. ರಾಜ್ಯ ನಾಯಕರು ಬಂಡಾಯ ಶಮನ ಮಾಡುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಅಸಮಾಧಾನ, ವೈಮನಸ್ಸು ಕೆಲದಿನ ಇರುತ್ತದೆ. ಆ ಬಳಿಕ ಎಲ್ಲವೂ ಸರಿ ಹೋಗುತ್ತದೆ. ಹೀಗಾಗಿ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಪುನರುಚ್ಚರಿಸಿದರು.</p>.<p><strong>ಇವನ್ನೂ ಓದಿ...</strong></p>.<p><strong>*<a href="https://www.prajavani.net/stories/stateregional/ceabinet-expantion-gives-more-596805.html" target="_blank">ಶಮನಗೊಳ್ಳದ ಸಂಪುಟ ಬೇಗುದಿ: ಕಾಂಗ್ರೆಸ್ ನಾಯಕರಲ್ಲಿ ತಳಮಳ</a></strong></p>.<p><strong>*<a href="https://www.prajavani.net/stories/district/bjp-planning-harm-congress-jds-596835.html" target="_blank">ಅತೃಪ್ತರ ಸೆಳೆದು ಸರ್ಕಾರ ಕೆಡವಲು ಬಿಜೆಪಿ ತಂತ್ರ?</a></strong></p>.<p><strong>*<a href="https://www.prajavani.net/stories/stateregional/cabinet-expansion-karnataka-596848.html" target="_blank">ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ತಪ್ಪಲು ನಾವು ಕಾರಣರಲ್ಲ: ಜಿ.ಪರಮೇಶ್ವರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>