ತಮಗೆ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಮುನಿಸಿಕೊಂಡಿರುವ ಅವರು ಪ್ರಚಾರದಿಂದ ದೂರ ಉಳಿದಿದ್ದಾರೆ. ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಸಮಾವೇಶದಿಂದಲೂ ದೂರ ಉಳಿದರು. ಈ ಮೂಲಕ ಜಿಲ್ಲಾ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಬಹಿರಂಗಗೊಂಡಿತು. ವಿಶೇಷವೆಂದರೆ, ಸಮಾವೇಶದಲ್ಲಿ ಮಾತನಾಡಿದ ಒಬ್ಬ ನಾಯಕರೂ ಅವರ ಹೆಸರನ್ನು ಕೂಡ ಪ್ರಸ್ತಾಪಿಸಲಿಲ್ಲ!