ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಬಜೆಟ್ ಮಂಡಿಸಿದ್ದಾರೆ. ಕೃಷ್ಣಾ ನೀರಾವರಿ ಯೋಜನೆಗಳಿಗೆ ₹ 7 ಸಾವಿರ ಕೋಟಿ ಕೇಳಿದ್ದೇವು. ₹ 10 ಸಾವಿರ ಕೋಟಿ ನೀಡಿದ್ದಾರೆ. ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ಹೆಚ್ಚಿನ ಹಣವನ್ನೂ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಪರವಾದ ಬಜೆಟ್ ಮಂಡಿಸಿದ್ದಾರೆ’ ಎಂದು ಪ್ರಶಂಶಿಸಿದರು.