ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಕಾರಣಕ್ಕೆ ರಮೇಶ ಜಾರಕಿಹೊಳಿ, ಬಿ. ನಾಗೇಂದ್ರ, ಮಹೇಶ ಕುಮಠಳ್ಳಿ ಮತ್ತು ಉಮೇಶ ಜಾಧವ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಕಾಂಗ್ರೆಸ್ ನೀಡಿರುವ ಮನವಿ ಸಂಬಂಧ ಸಭಾಧ್ಯಕ್ಷರು ಅವರೆಲ್ಲರಿಗೂ ನೋಟಿಸ್ ನೀಡಿದ್ದರು. ಆ ನೋಟಿಸ್ಗೆ ಉತ್ತರ ನೀಡಿದ್ದರೂ ಇದೇ 12ರಂದು ಖುದ್ದು ಹಾಜರಾಗಿ ಸ್ಪಷ್ಟೀಕರಣ ನೀಡುವಂತೆ ಸಭಾಧ್ಯಕ್ಷರು ಸೂಚಿಸಿದ್ದಾರೆ.