ಬೆಂಗಳೂರು: ಶಾಸಕರ ರಾಜೀನಾಮೆ ವಿಚಾರವಾಗಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ಶನಿವಾರ ಸುಪ್ರೀಂ ಕೋರ್ಟ್ಗೆ ವಿವರವಾದ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನೀಡಿದ ಸೂಚನೆಯಂತೆ ಅವರು ಈ ಕ್ರಮಕೈಗೊಂಡಿದ್ದಾರೆ. ಜುಲೈ 11ರ ಸಂಜೆ 6 ಗಂಟೆಯ ಒಳಗೆ ಸಭಾಧ್ಯಕ್ಷರ ಎದುರು ಹಾಜರಾಗಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿತ್ತು. ಅದರಂತೆ ಶಾಸಕರು ಬೆಂಗಳೂರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದರು.
ಸಭಾಧ್ಯಕ್ಷರು, ರಾಜೀನಾಮೆ ಸಲ್ಲಿಕೆಯ ಶಾಸಕರ ವಿಚಾರಣೆಗಳನ್ನು ಸಂಪೂರ್ಣವಾಗಿ ವಿಡಿಯೊ ಚಿತ್ರಿಕರಣ ಮಾಡಿಸಿದ್ದರು. ಪ್ರಮಾಣ ಪತ್ರದ ಜತೆಗೆ ವಿಡಿಯ ತುಣುಕುಗಳನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದಾರೆ.
ಇದರಲ್ಲಿ ಶಾಸಕರ ರಾಜೀನಾಮೆ ವಿಚಾರ ಹಾಗೂ ಇಬ್ಬರು ಶಾಸಕರ ಅನರ್ಹತೆಗೆ ಸಂಬಂಧಿಸಿದ ವಿವರಣೆ ಇದೆ.