ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನ ಕೆಲವು ಮುಖಂಡರ ಮೂಲಕ ಯತ್ನ ನಡೆಸಿದ್ದಾರೆ. ಆದರೆ, ಅವರ ಮಾತನ್ನು ನಮ್ಮ ಪಕ್ಷದವರು ಕೇಳುವುದಿಲ್ಲ. ಲಖನ್ ಜಾರಕಿಹೊಳಿಗೇ ಕಾಂಗ್ರೆಸ್ ಟಿಕೆಟ್ ಸಿಗುತ್ತದೆ. ಅವರನ್ನು ಬಿಟ್ಟರೆ ಗೋಕಾಕದಲ್ಲಿ ಏನೂ ಮಾಡಲಾಗುವುದಿಲ್ಲ. ಇನ್ನೆರಡು ದಿನಗಳಲ್ಲಿ ಟಿಕೆಟ್ ಘೋಷಣೆಯಾಗಲಿದೆ’ ಎಂದರು.