ಆಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷರು, ‘ಸಹಕಾರಿ ಬ್ಯಾಂಕುಗಳು, ಡಿಸಿಸಿ ಬ್ಯಾಂಕುಗಳ ಮೇಲೆ ರಾಜ್ಯ ಸರ್ಕಾರಕ್ಕೆ ಹಿಡಿತವಿರುತ್ತದೆ. ಹೀಗಾಗಿ, ಈ ಬ್ಯಾಂಕುಗಳಲ್ಲಿ ಸರ್ಕಾರದ ಹಣವನ್ನು ಠೇವಣಿ ಇಡಬೇಕು. ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಹಣ
ವಾಪಸು ಪಡೆದುಕೊಳ್ಳಬೇಕು. ಮೂಗು ಗಟ್ಟಿಯಾಗಿ ಹಿಡಿದುಕೊಂಡರೆ ಅವು ಬಾಯಿ ಬಿಡುತ್ತವೆ’ ಎಂದರು.