ವಿರಾಜಪೇಟೆ: ಕೊರೊನಾ ಮಹಾಮಾರಿಯ ವಿರುದ್ಧ ಹೋರಾಟ ನಡೆಸುತ್ತಿರುವ ಪೊಲೀಸ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳ ಹಸಿವು ನೀಗಿಸುವ ಕಾರ್ಯವನ್ನು ಚಿತ್ರನಟಿ ರಶ್ಮಿಕಾ ಮಂದಣ್ಣ ತಮ್ಮ ಸಂಸ್ಥೆಯ ವತಿಯಿಂದ ಸದ್ದಿಲ್ಲದೇ ಮಾಡುತ್ತಿದ್ದಾರೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ವಿರಾಜಪೇಟೆಯ ಪೊಲೀಸ್, ಹೋಂ ಗಾರ್ಡ್ಸ್ ಸೇರಿದಂತೆ ಸುಮಾರು 150 ಮಂದಿಗೆ ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆಯನ್ನು ಕಳೆದ 10 ದಿನಗಳಿಂದ ರಶ್ಮಿಕಾ ಮಂದಣ್ಣ ಮಾಡುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ತಂದೆ ಎಂ.ಮದನ್ ಮಂದಣ್ಣ ಅವರಿಗೆ ಸೇರಿದ ಸೆರಿನಿಟಿ ಸಂಸ್ಥೆಯಲ್ಲಿ ಅಡುಗೆ ತಯಾರಿಸಿ ವಾಹನದಲ್ಲಿ ಸಿಬ್ಬಂದಿಗಳಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ತಮ್ಮ ಹುಟ್ಟೂರಾದ ವಿರಾಜಪೇಟೆಯಲ್ಲಿ ಹಗಲಿರುಳೆನ್ನದೇ ಕರ್ತವ್ಯದಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಸಸ್ಯಹಾರ ಹಾಗೂ ಮಾಂಸಹಾರ ಊಟದ ವ್ಯವಸ್ಥೆಯನ್ನು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಮಾಡಿದ್ದಾರೆ.
ಮೇ 17ರವರೆಗೆ ಭೋಜನದ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ ಎಂದು ಸೆರೆನಿಟಿ ಸಂಸ್ಥೆಯ ವ್ಯವಸ್ಥಾಪಕ ವಿಕ್ಕಿ ಚಂಗಪ್ಪ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.