‘ಸಿದ್ಧಗಂಗಾ ಮಠ ಸೇರಿದಂತೆ ವಸತಿ, ಶಿಕ್ಷಣ ನೀಡುತ್ತಿರುವ ಸಂಘ, ಸಂಸ್ಥೆಗಳಿಗೆ ಪಡಿತರ ನೀಡುವುದನ್ನು ನಿಲ್ಲಿಸಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ನಿರಾಶ್ರಿತರು, ವೃದ್ಧರು, ಅಶಕ್ತರಿಗೆ ಆಹಾರ ಸಿಗದೆ ಬಳಲುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್, ಮುಖಂಡ ವಿ.ಎಸ್.ಉಗ್ರಪ್ಪ ಮಂಗಳವಾರ ಮಧ್ಯಾಹ್ನ ಪತ್ರಿಕಾಗೋಷ್ಠಿ ನಡೆಸಿ ಅಸಮಾಧಾನವ್ಯಕ್ತಪಡಿಸಿದ್ದರು.