ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟದಲ್ಲಿ ರೇವ್‌ ಪಾರ್ಟಿ: ಸೆರೆ

ಆನ್‌ಲೈನ್‌ ಮೂಲಕ ಗ್ರಾಹಕರ ಸೆಳೆದಿದ್ದ ಆಯೋಜಕರು
Last Updated 8 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ವಿಭೂತಿಕೆರೆ ಗ್ರಾಮದ ಮಾವಿನ ತೋಟವೊಂದರಲ್ಲಿ ರೇವ್‌ ಪಾರ್ಟಿ ಮಾಡುತ್ತಿದ್ದವರ ಮೇಲೆ ಪೊಲೀಸರು ಶನಿವಾರ ತಡರಾತ್ರಿದಾಳಿ ನಡೆಸಿದ್ದು, 15 ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ವೆಂಕಟೇಶ್ ಎಂಬುವವರಿಗೆ ಸೇರಿದ 32 ಎಕರೆ ಮಾವಿನ ತೋಟದ ಮಧ್ಯೆ ಪಾರ್ಟಿಗಾಗಿ ಶಾಮಿಯಾನ ಹಾಕಿ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಜೊತೆಗೆ ದೊಡ್ಡ ಧ್ವನಿವರ್ಧಕಗಳನ್ನು ಬಳಸಿಕೊಂಡು ಡಿ.ಜೆ. ಸಂಗೀತ ಮೊಳಗುತಿತ್ತು. ಮದ್ಯದ ಸರಬರಾಜು ಇತ್ತು. ಬೆಂಗಳೂರಿನ ಜೊತೆಗೆ ತಮಿಳುನಾಡು, ಕೇರಳದಿಂದ ನೂರಾರು ಯುವಕ ಯುವತಿಯರು ಪಾಲ್ಗೊಂಡಿದ್ದರು. ಆದರೆ ಇದ್ಯಾವುದಕ್ಕೂ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆದಿರಲಿಲ್ಲ.

‘ಸ್ಥಳೀಯರ ದೂರು ಆಧರಿಸಿ ದಾಳಿ ನಡೆಸಿದ್ದು, ಆಯೋಜಕರಾದ ಪೌರಾಣಿಕ್‌ ಪುರೋಹಿತ್‌, ಮಧುಮಿತಾ, ರಿಚು, ನಬಿರಾ ಸೇರಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಇದ್ದ 17 ಬಾಕ್ಸ್‌ನಷ್ಟು ಮದ್ಯ, ಡಿ.ಜೆ. ಸೌಂಡ್‌ ಉಪಕರಣಗಳು, ಲ್ಯಾಪ್‌ಟಾಪ್‌ ಹಾಗೂ ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ರಾಮನಗರ ಎಸ್ಪಿ ಅನೂಪ್‌ ಶೆಟ್ಟಿ ಮಾಹಿತಿ ನೀಡಿದರು.

ಆನ್‌ಲೈನ್‌ ಮೂಲಕ ಬುಕ್ಕಿಂಗ್‌

ರಾಮನಗರದ ಬೆಟ್ಟಗುಡ್ಡಗಳ ನಡುವಿನ ರಮಣೀಯ ತಾಣದಲ್ಲಿ ಪಾರ್ಟಿ ಆಯೋಜಿಸುವುದಾಗಿ ಆಯೋಜಕರು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ್ದರು. ಗ್ರಾಹಕರಿಗಾಗಿ ಬೆಂಗಳೂರಿನಿಂದ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT