ಪೂಜಾರಿ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲೇ 50ಕ್ಕೂ ಹೆಚ್ಚು ಪ್ರಕರಣಗಳಿವೆ. ಭೂಗತ ಪಾತಕಿಗಳಾದ ಛೋಟಾ ರಾಜನ್, ದಾವೂದ್ ಇಬ್ರಾಹಿಂ ತಂಡದಲ್ಲಿ ಗುರುತಿಸಿಕೊಂಡಿದ್ದ ರವಿ ಪೂಜಾರಿ ವಿರುದ್ಧ ಮಹಾರಾಷ್ಟ್ರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಗಣ್ಯರಿಗೆ ಬೆದರಿಕೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಗಳೂ ದಾಖಲಾಗಿವೆ.