ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಾಸಕ ಶಿವಶಂಕರರೆಡ್ಡಿ ಕೈ ಕತ್ತರಿಸುವೆ: ರವಿನಾರಾಯಣ ರೆಡ್ಡಿ

ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಎನ್.ಎಂ.ರವಿನಾರಾಯಣ ರೆಡ್ಡಿ ಹೇಳಿಕೆ
Last Updated 7 ನವೆಂಬರ್ 2019, 19:14 IST
ಅಕ್ಷರ ಗಾತ್ರ

ಗೌರಿಬಿದನೂರು: ‘ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಅವರ ಕೈ ಕತ್ತರಿಸುತ್ತೇವೆ’ ಎಂಬುದಾಗಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಎನ್.ಎಂ.ರವಿನಾರಾಯಣ ರೆಡ್ಡಿ ಅವರುನಗರಸಭೆ ಚುನಾವಣೆ ಪ್ರಚಾರದ ವೇಳೆ ಹೇಳಿದ್ದಾರೆ ಎನ್ನಲಾದ ಮಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಚರ್ಚೆಗೆ ಎಡೆ ಮಾಡಿದೆ.

ಇತ್ತೀಚೆಗಷ್ಟೇ ಶಿವಶಂಕರರೆಡ್ಡಿ ಅವರು ಮಂಚೇನಹಳ್ಳಿ ತಾಲ್ಲೂಕು ರಚನೆ ವಿಚಾರವಾಗಿ ಮಾತನಾಡುತ್ತ ‘ನನ್ನ ಕ್ಷೇತ್ರದಲ್ಲಿ ಕೈ ಹಾಕಿದವರ ಕೈ ಕತ್ತರಿಸುತ್ತೇನೆ’ ಎಂದು ಪರೋಕ್ಷವಾಗಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರ ವಿರುದ್ಧ ಗುಡುಗಿದ್ದರು.

ಪಟ್ಟಣದಲ್ಲಿ ಬುಧವಾರ ಸಂಜೆ ನಡೆದ ಪ್ರಚಾರ ಸಭೆಯಲ್ಲಿ ಶಿವಶಂಕರರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ರವಿನಾರಾಯಣರೆಡ್ಡಿ, ‘ನಗರಸಭೆ ವ್ಯಾಪ್ತಿಯ ನದಿಗಡ್ಡೆ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಸಂತೆ ಮೈದಾನದಲ್ಲಿ ಹಾಗೂ ನಗರಸಭೆ ವ್ಯಾಪ್ತಿಯ ಬಡವರ ಮನೆಗಳ ಮೇಲೆ ಕೈ ಹಾಕಿದರೆ ಶಾಸಕರ ಕೈ ಕತ್ತರಿಸುವುದು ನಾನೇ’ ಎಂದು ಹೇಳಿರುವುದು ಇದೀಗ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದೆ.

‘ಸುಧಾಕರ್ ಅವರಿಂದ ಶಿವಶಂಕರರೆಡ್ಡಿ ಕೈ ಕತ್ತರಿಸುವ ಕೆಲಸ ಆಗುವುದಿಲ್ಲ. ಅದು ನನ್ನಿಂದ ಆಗುತ್ತದೆ. ಏಕೆಂದರೆ, ಈ ಹಿಂದೆಯೇ ಅವರ ಎರಡೂ ಕೈಗಳನ್ನು ಮುರಿದು ನಮ್ಮ ಶಕ್ತಿ ಏನೆಂದು ತೋರಿಸಿದ್ದೇವೆ’ ಎಂದು ರವಿನಾರಾಯಣರೆಡ್ಡಿ ಮಾತನಾಡಿರುವುದು, ರಾಜಕೀಯ ಸಂಘರ್ಷಕ್ಕೆ ಎಡೆ ಮಾಡುವ ಸುಳಿವು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT