<p><strong>ಬೆಂಗಳೂರು</strong>: ರಾಯಚೂರು ಜಿಲ್ಲೆಯ ನೂರಾರು ಹಳ್ಳಿಗಳು ಬರದಿಂದ ತತ್ತರಿಸಿದ್ದು, ಗುಟುಕು ನೀರಿಗಾಗಿ ಪರದಾಡುತ್ತಿವೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪವೂ ಏರಿಕೆಯಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ.</p>.<p>ರಾಯಚೂರು ನಗರಕ್ಕೆ ಹೊಂದಿಕೊಂಡಿರುವ ತುಂಟಾಪುರ ಗ್ರಾಮದಲ್ಲಿ 400 ಕುಟುಂಬಗಳು ನೆಲೆಸಿವೆ. ಇಲ್ಲಿ ಸಾರ್ವಜನಿಕವಾಗಿ ಎರಡು ಕೊಳವೆ ಬಾವಿಗಳಿದ್ದು, ಪ್ರತಿಯೊಂದರಲ್ಲಿ ಅರ್ಧ ಇಂಚು ನೀರು ಬರುತ್ತಿದೆ. ನೀರಿಗಾಗಿ ಈ ಕೊಳವೆ ಬಾವಿಗಳನ್ನೇ ನಂಬಿದ್ದು, ಪ್ರತಿ ದಿನ ಒಬ್ಬರಿಗೆ 2 ಕೊಡ ನೀರು ಸಿಗುತ್ತದೆ. ಅತ್ಯಲ್ಪ ನೀರಿನಲ್ಲೇ ಜೀವ ಉಳಿಸಿಕೊಳ್ಳಬೇಕಾಗಿದೆ.</p>.<p>ಕಳೆದ ಎರಡು ವಾರಗಳಲ್ಲಿ 10 ಕೊಳವೆ ಬಾವಿಗಳನ್ನು ಕೊರೆಸಿದ್ದು, ಎರಡರಲ್ಲಿ ಮಾತ್ರ ನೀರು ಜಿನುಗುತ್ತಿದೆ. ಕುಟುಂಬದ ಒಬ್ಬರು ಪ್ರತಿ ದಿನವೂ ನೀರು ತುಂಬಿಸುವ ಕಾಯಕ ಮಾಡಬೇಕಾಗಿದೆ. ಇದಕ್ಕೂ ಮುನ್ನ 3 ಕಿ.ಮೀ ದೂರದ ಪ್ರದೇಶಕ್ಕೆ ಹೋಗಿ, ಅಲ್ಲಿಂದ ನೀರು ಹೊತ್ತು ತರಬೇಕಿತ್ತು ಎಂದು ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ನಾಯಕ್ ಹೇಳುತ್ತಾರೆ.</p>.<p>ಕೊಳವೆ ಬಾವಿಗಳನ್ನು ಕೊರೆಸಲು ಮೂರು ಹಂತಗಳಲ್ಲಿ ₹7.5 ಕೋಟಿ ಬಿಡುಗಡೆ ಮಾಡಲಾಗಿದೆ. ಕೊಳವೆ ಬಾವಿ ಕೊರೆಸಿದರೂ ನೀರು ಬರುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಳಿನಿ ಅತುಲ್ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಯಚೂರು ಜಿಲ್ಲೆಯ ನೂರಾರು ಹಳ್ಳಿಗಳು ಬರದಿಂದ ತತ್ತರಿಸಿದ್ದು, ಗುಟುಕು ನೀರಿಗಾಗಿ ಪರದಾಡುತ್ತಿವೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪವೂ ಏರಿಕೆಯಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ.</p>.<p>ರಾಯಚೂರು ನಗರಕ್ಕೆ ಹೊಂದಿಕೊಂಡಿರುವ ತುಂಟಾಪುರ ಗ್ರಾಮದಲ್ಲಿ 400 ಕುಟುಂಬಗಳು ನೆಲೆಸಿವೆ. ಇಲ್ಲಿ ಸಾರ್ವಜನಿಕವಾಗಿ ಎರಡು ಕೊಳವೆ ಬಾವಿಗಳಿದ್ದು, ಪ್ರತಿಯೊಂದರಲ್ಲಿ ಅರ್ಧ ಇಂಚು ನೀರು ಬರುತ್ತಿದೆ. ನೀರಿಗಾಗಿ ಈ ಕೊಳವೆ ಬಾವಿಗಳನ್ನೇ ನಂಬಿದ್ದು, ಪ್ರತಿ ದಿನ ಒಬ್ಬರಿಗೆ 2 ಕೊಡ ನೀರು ಸಿಗುತ್ತದೆ. ಅತ್ಯಲ್ಪ ನೀರಿನಲ್ಲೇ ಜೀವ ಉಳಿಸಿಕೊಳ್ಳಬೇಕಾಗಿದೆ.</p>.<p>ಕಳೆದ ಎರಡು ವಾರಗಳಲ್ಲಿ 10 ಕೊಳವೆ ಬಾವಿಗಳನ್ನು ಕೊರೆಸಿದ್ದು, ಎರಡರಲ್ಲಿ ಮಾತ್ರ ನೀರು ಜಿನುಗುತ್ತಿದೆ. ಕುಟುಂಬದ ಒಬ್ಬರು ಪ್ರತಿ ದಿನವೂ ನೀರು ತುಂಬಿಸುವ ಕಾಯಕ ಮಾಡಬೇಕಾಗಿದೆ. ಇದಕ್ಕೂ ಮುನ್ನ 3 ಕಿ.ಮೀ ದೂರದ ಪ್ರದೇಶಕ್ಕೆ ಹೋಗಿ, ಅಲ್ಲಿಂದ ನೀರು ಹೊತ್ತು ತರಬೇಕಿತ್ತು ಎಂದು ಗ್ರಾಮ ಪಂಚಾಯಿತಿ ಸದಸ್ಯ ಆನಂದ್ ನಾಯಕ್ ಹೇಳುತ್ತಾರೆ.</p>.<p>ಕೊಳವೆ ಬಾವಿಗಳನ್ನು ಕೊರೆಸಲು ಮೂರು ಹಂತಗಳಲ್ಲಿ ₹7.5 ಕೋಟಿ ಬಿಡುಗಡೆ ಮಾಡಲಾಗಿದೆ. ಕೊಳವೆ ಬಾವಿ ಕೊರೆಸಿದರೂ ನೀರು ಬರುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಳಿನಿ ಅತುಲ್ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>