ಇದಕ್ಕೂ ಮುನ್ನ ಮಾತನಾಡಿದ ಶಾಸಕ ಕೃಷ್ಣ ಬೈರೇಗೌಡ, ‘ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ಅವರೇ ಮೊದಲು ಆರಂಭಿಸಿದರು. ಆಗ ₹2 ಇದ್ದ ಪ್ರೋತ್ಸಾಹಧನ ಈಗ ₹5ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬಹುತೇಕ ಎಲ್ಲಾ ರೈತರೂ ಹಸುಗಳನ್ನು ಸಾಕಿದ್ದು, ಹಾಲು ಉತ್ಪಾದಕರೇ ಆಗಿದ್ದಾರೆ. ವಿದೇಶದಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳು ಆಮದು ಮಾಡಿಕೊಂಡರೆ ಅವರೆಲ್ಲರೂ ಸಂಕಷ್ಡಕ್ಕೆ ಸಿಲುಕುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಮೇಲೆ ಮುಖ್ಯಮಂತ್ರಿ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.