ಮಂಗಳೂರು: ‘ದೇಶದ ಸ್ವಾತಂತ್ರ್ಯ ಮತ್ತು ಅಖಂಡತೆಗಾಗಿ ಬಲಿದಾನ ಮಾಡಿರುವ ವಿ.ಡಿ. ಸಾವರ್ಕರ್ ಬಗ್ಗೆ ಗೊತ್ತಿಲ್ಲದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಬಾಯಿಗೆ ಬಂದಂತೆ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ನಡುವೆ ತಾರತಮ್ಯ ಮಾಡುತ್ತಿರುವುದು ದುರದೃಷ್ಟಕರ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.