ಆದರೆ, ಈ ಚರ್ಚೆ ಎಲ್ಲಿ, ಯಾವಾಗ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಆದರೆ, ಲೋಕಸಭೆ ಚುನಾವಣೆ ಸೋಲಿನ ಬಳಿಕ ಜಿಲ್ಲೆಯ ಜನರ ಬಳಿ ತೆರಳುತ್ತಿರುವ ನಿಖಿಲ್ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಜೊತೆಗೆ ಹಿರಿಯ ರಾಜಕೀಯ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆಯು ತ್ತಿದ್ದಾರೆ. ಇದೆಲ್ಲ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿಖಿಲ್ ನಡೆಸುತ್ತಿರುವ ಪೂರ್ವ ತಯಾರಿ ಎಂಬ ಮಾತುಗಳೂ ಕೇಳಿಬರುತ್ತಿವೆ.