ಯಾದಗಿರಿ: ‘ರಾಜ್ಯದ ಸಮ್ಮಿಶ್ರಸರ್ಕಾರ ಉಳಿಸಲು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ’ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಬಿ.ಪಾಟೀಲ ಹೇಳಿದರು.
‘ಸಚಿವ ಸ್ಥಾನದಲ್ಲಿ ಮುಂದುವರಿಯುವ, ರಾಜೀನಾಮೆ ನೀಡುವ ವಿಷಯದಲ್ಲಿ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ಶುಕ್ರವಾರ ಇಲ್ಲಿ ಹೇಳಿದರು.
ಜಿಂದಾಲ್ಗೆ ಭೂಮಿ ನೀಡುವ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.
‘ಮುಖ್ಯಮಂತ್ರಿ ಅವರ ಗ್ರಾಮ ವಾಸ್ತವ್ಯ ಉತ್ತಮ ಕಾರ್ಯಕ್ರಮ.ಕುಮಾರಸ್ವಾಮಿ ಹಿಂದೆಮುಖ್ಯಮಂತ್ರಿ ಆಗಿದ್ದಾಗಬೀದರ್ ಜಿಲ್ಲೆಯ ಹುಮನಾಬಾದ್ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಈಗ ಗುರುಮಠಕಲ್ ತಾಲ್ಲೂಕು ಆಯ್ಕೆ ಮಾಡಿಕೊಂಡಿದ್ದಾರೆ.
ಗ್ರಾಮ ವಾಸ್ತವ್ಯವನ್ನು ಜನರು ಸ್ವಾಗತಿಸುತ್ತಿದ್ದಾರೆ. ಆದರೆ,ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮಗಳು ಇನ್ನೂ ಅಭಿವೃದ್ಧಿಯಾಗಿಲ್ಲ ಎನ್ನುವ ಆರೋಪ ಸರಿಯಲ್ಲ’ ಎಂದರು.