ಸಚಿವರಾಗಲೇಬೇಕೆಂಬ ನೂತನ ಶಾಸಕರ ಕನಸು ಸದ್ಯಕ್ಕೆ ಭಗ್ನವಾಗಿದೆ. ಜನವರಿಯಲ್ಲಿಯೇ ಸಂಪುಟ ವಿಸ್ತರಣೆ ಅನುಮಾನ ಎಂಬ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಕಾರಿಪುರದಲ್ಲಿ ಮಾತನಾಡಿದ ಯಡಿಯೂರಪ್ಪ, ‘ರಾಜ್ಯಕ್ಕೆ ಬರಲಿರುವ ಅಮಿತ್ ಶಾ ಜತೆ ಚರ್ಚಿಸುತ್ತೇನೆ. 19ಕ್ಕೆ ದಾವೋಸ್ಗೆ ತೆರಳಲಿದ್ದು, ಮರಳಿದ ಬಳಿಕ ವಿಸ್ತರಣೆ ಮಾಡುತ್ತೇನೆ’ ಎಂದರು.