ಸಿದ್ದರಾಮಯ್ಯ ಸರ್ಕಾರ ಇದ್ದಾಗ ಟಿಪ್ಪು ಜಯಂತಿ ಜಾರಿಗೆ ತಂದರು. ಈ ಜಯಂತಿಯಿಂದ ಕಗ್ಗೊಲೆಯಾದವು, ಗಲಭೆಗಳಾದವು. ಸಿದ್ದರಾಮಯ್ಯ ಸರ್ಕಾರ ನರಹಂತಕ ಸರ್ಕಾರ. ಸಿದ್ದರಾಮಯ್ಯನ ಸರ್ಕಾರ ಇದ್ದಾಗ ಕೊಲೆಗಳು, ಅತ್ಯಾಚಾರಗಳು ಆದವು. ಮತ ಬ್ಯಾಂಕ್ಗೆ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿದ್ದಾರೆ. ಪೌರತ್ವ ತಿದ್ದುಪಡಿಗೆ ಅಡ್ಡಿ ಮಾಡುತ್ತಿದ್ದಾರೆ. ಸಂವಿಧಾನ ವಿರೋಧ ಮಾಡಿದವರು ದೇಶದ್ರೋಹಿಗಳು ಎಂದು ಹೇಳುತ್ತಾರೆ. ಈಗ ಸಂವಿಧಾನವನ್ನು ವಿರೋಧ ಮಾಡುತ್ತಿರುವ ದೇಶದ್ರೋಹಿಗಳು ಯಾರು ಎಂದಾಗ ಕಾಂಗ್ರೆಸ್ನವರು ಎಂದು ಕಾರ್ಯಕರ್ತರು ಕೂಗಿ ಹೇಳಿದರು. ಬಳಿಕ ನಾನು ಹೇಳಿಲ್ಲ, ನೀವೇ ಹೇಳಿದ್ದು ಎಂದು ಹೇಳಿದರು.