ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ ಸ್ಪರ್ಧೆಗೆ ಅವಕಾಶ ಕೋರಲಿರುವ ಅನರ್ಹರು

ತಡೆಯಾಜ್ಞೆಗೆ ಮೊರೆ
Last Updated 23 ಸೆಪ್ಟೆಂಬರ್ 2019, 2:44 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯುವ ವಿಚಾರಣೆಯ ವೇಳೆ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡುವಂತೆ ಅನರ್ಹ ಶಾಸಕರು ಮನವಿ ಸಲ್ಲಿಸಲಿದ್ದಾರೆ.

ಸ್ಪೀಕರ್‌ ನೀಡಿರುವ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ 17 ಶಾಸಕರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿದೆ.

ಪ್ರಕರಣ ಇತ್ಯರ್ಥಗೊಳ್ಳದೇ ಇರುವುದರಿಂದ ಸ್ಪರ್ಧೆಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ, ಆದೇಶ ಹೊರಬೀಳುವವರೆಗೆ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮೌಖಿಕವಾಗಿ ಕೋರಲಾಗುವುದು ಎಂದು ಅನರ್ಹರ ಪರ ವಕೀಲರು ತಿಳಿಸಿದರು.

ತಮಿಳುನಾಡಿನಲ್ಲಿ ಅನರ್ಹ ಶಾಸಕರ ಸ್ಪರ್ಧೆಗೆ ಇತ್ತೀಚೆಗಷ್ಟೇ ಅವಕಾಶ ನೀಡಲಾಗಿದೆ. ಅದೇ ಮಾದರಿಯಲ್ಲಿ ಅವಕಾಶ ನೀಡುವಂತೆ ಕೋರಲು ನಿರ್ಧರಿಸಲಾಗಿದೆ. ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಡಾ.ಅಶ್ವತ್ಥನಾರಾಯಣ ಅವರು ಅನರ್ಹ ಶಾಸಕರ ಪರ ವಾದ ಮಂಡಿಸಲಿರುವ ಹಿರಿಯ ವಕೀಲ ಮುಕುಲ್‌ ರೋಹಟಗಿ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT