ನಾವು ಅತೃಪ್ತ ಶಾಸಕರಲ್ಲ, ಅಸಹಾಯಕ ಶಾಸಕರು: ಶಿವರಾಮ ಹೆಬ್ಬಾರ್

ಯಲ್ಲಾಪುರ (ಉತ್ತರ ಕನ್ನಡ): ನಾವು ಅತೃಪ್ತ ಶಾಸಕರಲ್ಲ ಅಸಹಾಯಕ ಶಾಸಕರು. ಕ್ಷೇತ್ರದ ಜನತೆಗೆ ನ್ಯಾಯ ಒದಗಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಅಸಹಾಯಕರಾಗಿ ರಾಜೀನಾಮೆ ನೀಡಿದ್ದೇವೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಗುರುವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ನಾವು ಇಂತಹ ದೊಡ್ಡ ನಿರ್ಣಯ ಕೈಗೊಳ್ಳಬೇಕಾದರೆ ಒಂದು ದಿನದಲ್ಲಿ ಕೈಗೊಳ್ಳಲು ಸಾಧ್ಯವಿಲ್ಲ. ಅನೇಕ ದಿನಗಳಿಂದ ಅಸಹಾಯಕತೆ ಅನುಭವಿಸಿ ಮಿತಿ ಮೀರಿದ ನಂತರ ಈ ನಿರ್ಣಯಕ್ಕೆ ಬಂದಿದ್ದೇವೆ. 20 ಶಾಸಕರ ರಾಜೀನಾಮೆ ಸಣ್ಣ ಸಂಖ್ಯೆಯಲ್ಲ. ಪರಿಸ್ಥಿತಿ ಕೈ ಮೀರಿ ಹೋಗುತ್ತದೆ ಎಂದಾಗ ಒಟ್ಟಾಗಿ ರಾಜೀನಾಮೆ ನಿರ್ಣಯಕ್ಕೆ ಬಂದಿದ್ದೇವೆ’ ಎಂದರು.
ಇದನ್ನೂ ಓದಿ... ಮನೆಗೆ ಮರಳಿದ ಯಲ್ಲಾಪುರ ಶಾಸಕ
‘ನಾವೆಲ್ಲಾ ಒಟ್ಟಾಗಿದ್ದು ನಿರ್ಣಯಕ್ಕೆ ಬದ್ಧರಾಗಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ಅವರು ನಮ್ಮಲ್ಲಿ ಎಲ್ಲರೂ ಹಿರಿಯ ಶಾಸಕರೇ ಅಗಿದ್ದಾರೆ. ಮೊದಲ ಬಾರಿ ಯಾರೂ ಶಾಸಕರಾದವರಿಲ್ಲ. ಇವರಲ್ಲಿ ಯಾರೂ ದುಡ್ಡು ನೋಡದವರೇನಲ್ಲ. ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆಯೇ ಹೊರತು ಪಕ್ಷಕ್ಕಲ್ಲ. ಪಕ್ಷದ ಯಾವುದೇ ನಾಯಕರು ನಮ್ಮನ್ನು ಸಂಪರ್ಕಿಸದೇ, ಯಾವುದೇ ಕಾರಣಕ್ಕೂ ಪಕ್ಷಕ್ಕೆ ಪಾದಾರ್ಪಣೆ ಮಾಡಬಾರದು ಎಂದು ಹೇಳಿಕೆ ನೀಡುತ್ತಿದ್ದಾರೆ. ಕ್ಷೇತ್ರದ ಜನತೆಯ ಮೇಲೆ ವಿಶ್ವಾಸವಿದೆ. ಅವರು ಪರಿಸ್ಥಿತಿಯನ್ನು ಅರಿಯುತ್ತಾರೆ ಎಂದರು.
ಇದನ್ನೂ ಓದಿ... ಅಮಿತ್ ಶಾ ಭೇಟಿಯಾದ ರಾಜ್ಯ ಬಿಜೆಪಿ ನಿಯೋಗ: ಸರ್ಕಾರ ರಚನೆ ಕುರಿತು ಚರ್ಚೆ
ಬಿಜೆಪಿ ಸೇರ್ಪಡೆಗೊಂಡು ಮಂತ್ರಿಯಾಗ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿ, ‘ನಾವು ರಾಜೀನಾಮೆ ನೀಡಿದ ಶಾಸಕರು ನಮ್ಮ ಬೆಂಬಲವನ್ನು ಪಡೆದು ಬಿಜೆಪಿ ಏನು ಮಾಡುತ್ತದೆ ಎಂದ ಹೆಬ್ಬಾರ್, ಮೊದಲು ಸ್ಪೀಕರ್ ರಾಜೀನಾಮೆ ಅಂಗೀಕರಿಸಲಿ ನಂತರ ಒಟ್ಟಾಗಿ ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ. ಇದುವರೆಗೂ ನಾವಿನ್ನೂ ಪಕ್ಷಕ್ಕೆ ರಾಜಿನಾಮೆ ನೀಡಿಲ್ಲ. ಯಾವುದೇ ಪಕ್ಷದ ನಾಯಕರನ್ನೂ ಸಂಪರ್ಕಿಸಿಲ್ಲ. ಸ್ಪೀಕರ್ ಮುಂದೆ ಎರಡು ಪ್ರಶ್ನೆಗಳಿವೆ ಒಂದು ರಾಜೀನಾಮೆ, ಇನ್ನೊಂದು ಅನರ್ಹತೆ. ಅನರ್ಹರಾಗುವ ಸ್ಥಿತಿಯಲ್ಲಿ ನಾವಿಲ್ಲ. ಇನ್ನು ರಾಜೀನಾಮೆ ಅಂಗಿಕಾರವಾಗಲೇ ಬೇಕು. ನಂತರದಲ್ಲಿ ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ’ ಎಂದರು.
‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...
ಬಿಎಸ್ವೈ ವೇಗಕ್ಕೆ ಶಾ ಅಂಕುಶ? ‘ದೋಸ್ತಿ’ ಬಿದ್ದರೂ ಬಿಜೆಪಿಗೆ ಸಿಗದ ‘ಸಿಹಿ’
‘ಕಮಲ’ಪಡೆಗೆ ಸಂದೇಹ: ಅತೃಪ್ತರ ‘ಅಜ್ಞಾತ’ವಾಸ
ಶೋಕ ಗೀತೆ ಹಾಡಬೇಡಿ; ಮೈತ್ರಿ ಮರೆಯಿರಿ
ಇಂಥ ರಾಜಕೀಯ ಮಾಡಿ ನೀವು ಸಾಧಿಸಿದ್ದೇನು?
‘ಮೈತ್ರಿ vs ಬಿಜೆಪಿ’ ಮುಖ್ಯಮಂತ್ರಿ ಕಪ್ ಪಂದ್ಯಾವಳಿ: ಫೈನಲ್ ಹೀಗಾಯ್ತು...
ಸೌಧದಲ್ಲಿ ವಿಲವಿಲ, ಮೀಮ್ಗಳಲ್ಲಿ ಕಿಲಕಿಲ
ವ್ಯಂಗ್ಯಚಿತ್ರಗಳಲ್ಲಿ ಕಂಡ ಕಲಾಪ ಪ್ರಸಂಗ
‘ದೋಸ್ತಿ’ ಮನೆಗೆ: ಅಧಿಕಾರ ಬಿಎಸ್ವೈಗೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿ: ನೆಟ್ಟಿಗರ ಮನವಿ
ರೇವಣ್ಣನ ನಿಂಬೆಹಣ್ಣಿಗೆ ಯಾವುದೇ ಬೆಲೆ ಇಲ್ಲ: ಎ.ಮಂಜು
ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ: ಯಡಿಯೂರಪ್ಪ ಭರವಸೆ
ವಿಶ್ವಾಸಮತ ನಿರ್ಣಯದ ಪರ 99, ವಿರುದ್ಧ 105: ಉರುಳಿತು ಮೈತ್ರಿ ಸರ್ಕಾರ
ಅತ್ಯಂತ ಸಂತೋಷದಿಂದ ನಾನು ಈ ಸ್ಥಾನ ತ್ಯಜಿಸುತ್ತೇನೆ: ಸದನದಲ್ಲಿ ಎಚ್ಡಿಕೆ ಮಾತು
ದೇವೇಗೌಡರ ಕುಟುಂಬಕ್ಕೆ ತುಮಕೂರು ಜನರ ಶಾಪ ತಟ್ಟಿದೆ: ಸಂಸದ ಬಸವರಾಜು
ಐಎಂಎ ಮನ್ಸೂರ್ಖಾನ್ನನ್ನು ಬಂಧಿಸಿದ್ದು ನಮ್ಮ ಎಸ್ಐಟಿ ಅಧಿಕಾರಿಗಳು: ಎಚ್ಡಿಕೆ
ರಾಜೀನಾಮೆ ಪತ್ರವನ್ನು ಯಡಿಯೂರಪ್ಪಗೆ ತೋರಿಸಿದ ಸ್ಪೀಕರ್ ರಮೇಶ್ಕುಮಾರ್
ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ: ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಬಂಧನ
ಸೌಧದಲ್ಲಿ ವಿಲವಿಲ, ಮೀಮ್ಗಳಲ್ಲಿ ಕಿಲಕಿಲ
ವ್ಯಂಗ್ಯಚಿತ್ರಗಳಲ್ಲಿ ಕಂಡ ಕಲಾಪ ಪ್ರಸಂಗ
ಪಾಕ್ ಪ್ರಧಾನಿ ಜತೆ ಬಿರಿಯಾನಿ ತಿನ್ನುವವರು ನೀವು: ಬಿಜೆಪಿಗೆ ತಿವಿದ ಯು.ಟಿ.ಖಾದರ್
ಅತೃಪ್ತ ಶಾಸಕರ ಪರ ಸ್ಪೀಕರ್ ಭೇಟಿಯಾದ ವಕೀಲ ಅಶೋಕ್ ಹಾರನಹಳ್ಳಿ
ವಿಶ್ವಾಸಮತ: ಕಲಾಪದಲ್ಲಿ ಭಾಗವಹಿಸಲು ಆಡಳಿತ ಪಕ್ಷದ ನಿರಾಸಕ್ತಿ?
ವಿಧಾನಸಭೆ ಕಲಾಪ ಆರಂಭ: ಸದನಕ್ಕೆ ಬಂದ ಸ್ಪೀಕರ್, ಬಿಜೆಪಿ ಶಾಸಕರು, ಮೈತ್ರಿ ನಾಪತ್ತೆ
ಸಿಎಂ ಕುಮಾರಸ್ವಾಮಿ ರಾಜೀನಾಮೆ ಪತ್ರ ನಕಲಿ? ಚರ್ಚೆಗೆ ಗ್ರಾಸ
ರಾಜೀನಾಮೆ ಕೊಡಲು ಹೇಳ್ರಿ: ಸಿಎಂ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ಸಿಡಿ ಮಿಡಿ
ದೋಸ್ತಿಗೆ ಇನ್ನೂ ಸಿಗದ ‘ವಿಶ್ವಾಸ’; ಮತಕ್ಕೆ ಹಾಕಲು ಮಂಗಳವಾರ ಸಂಜೆ 6ರ ಗಡುವು
ಬಿರಿಯಾನಿ ತಿನ್ನದಿದ್ದರೆ ಹೇಗೆ: ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಪ್ರಶ್ನೆ
ರಾಜೀನಾಮೆ ಕೊಟ್ಟವರಿಗೂ ವಿಪ್ ಅನ್ವಯ; ಸ್ಪೀಕರ್ ರೂಲಿಂಗ್
‘ಬಿಜೆಪಿ ಕೈಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯ ರಕ್ತ’
ಇಂದು ವಿಚಾರಣೆಗೆ ಬರಲು ಸಾಧ್ಯವಿಲ್ಲ: ಅತೃಪ್ತ ಶಾಸಕರಿಂದ ಸ್ಪೀಕರ್ಗೆ ಪತ್ರ
ದೇವರ ವರ: ಇಬ್ಬರು ಮುಖ್ಯಮಂತ್ರಿ– ಎಚ್ಡಿಕೆ–ಬಿಎಸ್ವೈಗೆ ದೇವರ ಹೂ ಪ್ರಸಾದ
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೊ: ಸದನದಲ್ಲಿ ಕಣ್ಣೀರಿಟ್ಟ ಲಿಂಬಾವಳಿ
ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ: ಇಲ್ಲಿದೆ ಈವರೆಗಿನ ಸಮಗ್ರ ಮಾಹಿತಿ