ಈಗಾಗಲೇ ಶರಾವತಿ ಕಣಿವೆಯಲ್ಲಿ ಸಾಕಷ್ಟು ಯೋಜನೆಗಳು, ಅರಣ್ಯ ಒತ್ತುವರಿ, ಗಣಿಗಾರಿಕೆ, ಅಣೆಕಟ್ಟು ಯೋಜನೆಗಳು ಜಾರಿಯಾಗಿವೆ. ಇದರಿಂದ ಸಾಕಷ್ಟು ಅರಣ್ಯ ನಾಶವಾಗಿದೆ. ಭೂಕುಸಿತ ಉಂಟಾಗಿದೆ. ಪರಿಸರದ ಧಾರಣಾ ಸಾಮರ್ಥ್ಯ ಮುಗಿದಿದೆ. ಈ ಬಗ್ಗೆ ಈಗಾಗಲೇ ವಿಜ್ಞಾನಿಗಳು, ಪರಿಸರ ಸಂಘಟನೆಗಳು ಸರ್ಕಾರದ ಗಮನ ಸೆಳೆದಿವೆ. ಈ ಹಿನ್ನೆಲೆಯಲ್ಲಿ ಪರಿಸರ, ಜೀವವೈವಿಧ್ಯ, ಅರಣ್ಯ, ವನ್ಯಜೀವಿ ತಜ್ಞರು, ಸಂಸ್ಥೆಗಳ ಪ್ರತಿನಿಧಿಗಳ ಜತೆ ಯೋಜನೆಯ ಬಗ್ಗೆ ಸಮಾಲೋಚನಾ ಸಭೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.