ದೂರು ನೀಡಿದ್ದ ಸಂತ್ರಸ್ತರು: ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್ನಲ್ಲಿ ನಿತ್ಯಾನಂದ ವಿರುದ್ಧ ಅತ್ಯಾಚಾರ, ವಂಚನೆ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಪ್ರಕರಣಗಳು ದಾಖಲಾಗಿವೆ. ಇವುಗಳ ತನಿಖೆ ನಡೆಯುತ್ತಿರುವಾಗಲೇ ಆರೋಪಿ ತಲೆ
ಮರೆಸಿಕೊಂಡಿದ್ದಾರೆ. ‘ಪ್ರಕರಣದ ಸಂತ್ರಸ್ತರು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದಕ್ಕೆ ಕೇಂದ್ರ ಸ್ಪಂದಿಸಿದ್ದು, ಕ್ರಮ ಜರುಗಿಸುವಂತೆ 3 ರಾಜ್ಯಗಳ ಗೃಹ ಇಲಾಖೆಗೆ ಸೂಚನೆ ನೀಡಿದೆ’ ಎಂದು ಮೂಲಗಳು ತಿಳಿಸಿವೆ.