ಬೆಂಗಳೂರು: ‘ಸಚಿವ ಸಂಪುಟದಲ್ಲಿ ಕರ್ನಾಟಕ ರೆಡ್ಡಿ ಸಮದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದು ನೋವಿನ ಸಂಗತಿ. ಇದನ್ನು ಸಮುದಾಯ ತೀವ್ರವಾಗಿ ಖಂಡಿಸುತ್ತದೆ’ ಎಂದು ಕರ್ನಾಟಕ ರೆಡ್ಡಿಜನ ಸಂಘದ ಅಧ್ಯಕ್ಷ ವಿಜಯ ರಾಘವ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೆಡ್ಡಿ ಸಮುದಾಯಕ್ಕೆ ಸೇರಿದ 20 ಮಂದಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಪಕ್ಷಗಳಿಂದ ಚುನಾಯಿತರಾಗಿದ್ದಾರೆ. ಬಿಜೆಪಿಯಿಂದ 9 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಪ್ರತಿಭಟಿಸುತ್ತೇವೆ’ ಎಂದರು.