‘ಬಿಜೆಪಿಯಿಂದ ದೂರವಾಗಿ ಕೆಜೆಪಿಗೆ ಮರುಜೀವ ಕೊಡುವ ಪ್ರಯತ್ನದಲ್ಲಿದ್ದಾಗ ಯಡಿಯೂರಪ್ಪ ಈ ಡೈರಿ ಬರೆದಿದ್ದಾರೆ. ಈ ವೇಳೆ ಅನಂತಕುಮಾರ್ (2018ರಲ್ಲಿ ನಿಧನರಾದರು),ಈಶ್ವರಪ್ಪ ಸೇರಿದಂತೆ ಹಲವು ಹಿರಿಯ ನಾಯಕರೊಂದಿಗೆ ಯಡಿಯೂರಪ್ಪ ಸಂಬಂಧ ಹಳಸಿತ್ತು. ವಿರೋಧಿಗಳ ಸುಪರ್ದಿಯಲ್ಲಿರುವ ದಾಖಲೆಗಳನ್ನು ಪಡೆದುಕೊಳ್ಳಲು ಈ ನಾಯಕರು ಹಾತೊರೆಯುತ್ತಿದ್ದರು. ಈ ಹಂತದಲ್ಲಿ ಯಡಿಯೂರಪ್ಪ ಅವರ ಖಾಸಗಿ ಸಿಬ್ಬಂದಿಗೆ ದೊರೆತ ಈ ಡೈರಿ ನಂತರದ ದಿನಗಳಲ್ಲಿ ಅನಂತಕುಮಾರ್ ಸೇರಿ ಹಲವು ಹಿರಿಯ ನಾಯಕರ ಕೈ ಸೇರಿತು’ ಎಂದು ಅಧಿಕಾರಿಗಳ ಟಿಪ್ಪಣಿಯನ್ನು ಆಧರಿಸಿ ‘ಕ್ಯಾರವಾನ್’ ವರದಿ ಉಲ್ಲೇಖಿಸಿದೆ.