ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದಾಗಿ ಖಾಸಗಿ ಶಾಲೆಗಳು ಬಹಳ ಸಂಕಷ್ಟದಲ್ಲಿ ಇದ್ದು, ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಸರ್ಕಾರ ಪಾವತಿಸಬೇಕಾದ ಶುಲ್ಕವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ನ ಶಿಕ್ಷಕರು ಮತ್ತು ಪದವೀಧರ ಕ್ಷೇತಗರಗಳಿಂದ ಆಯ್ಕೆಯಾದ ಸದಸ್ಯರು ಪಕ್ಷಭೇದ ಮರೆತು ಒತ್ತಾಯಿಸಿದರು.