‘ಕಳೆದ ವರ್ಷ ಕೊಡಗು, ಮಲೆನಾಡು ಭಾಗಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣವೇ ಸ್ಪಂದಿಸಿವೆ. ರಸ್ತೆ, ಸೇತುವೆಯಂಥ ಮೂಲಸೌಕರ್ಯ ನಿರ್ಮಾಣವು ಕ್ಷಿಪ್ರಗತಿಯಲ್ಲಿ ಆಗುತ್ತಿದೆ’ ಎಂದ ಅವರು, ‘ರಾಜ್ಯದಲ್ಲಿ 156 ತಾಲ್ಲೂಕುಗಳು ಬರ ಪರಿಸ್ಥಿತಿ ಎದುರಿಸುತ್ತಿವೆ. ಅಲ್ಲಿ ಉದ್ಯೋಗ ಕಲ್ಪಿಸುವುದು, ನೀರು, ಮೇವು ಪೂರೈಕೆ ಸೇರಿದಂತೆ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದರು.