<p><strong>ಬೆಂಗಳೂರು:</strong> 71ನೇ ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದರು. </p>.<p>ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲರು ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು.</p>.<p>ಇದೇ ವೇಳೆ ಮಾತನಾಡಿದ ಅವರು, ‘ದೇಶದಾದ್ಯಂತ ಮೂಲಭೂತ ಕರ್ತವ್ಯಗಳ ಕುರಿತು ಆಂದೋಲನಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸಿಕೊಳ್ಳಬೇಕಾಗಿದೆ’ ಎಂದರು.</p>.<p>‘ಪುರುಷರು ಮಹಿಳೆಯರೊಂದಿಗೆ ಗೌರವದಿಂದ ನಡೆದುಕೊಳ್ಳಲು ಶಿಕ್ಷಣದ ಅವಶ್ಯಕತೆ ಇದೆ’ ಎಂದು ವಜುಭಾಯಿ ವಾಲಾ ತಿಳಿಸಿದರು.</p>.<p>‘ಕಳೆದ ಆಗಸ್ಟ್ನಲ್ಲಿ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ನಂತರ, 7 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸಂಕಷ್ಟಕ್ಕೊಳಗಾದ 2.07 ಲಕ್ಷ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರ ನೀಡಲಾಗಿದೆ’ ಎಂದರು.</p>.<p>ದೇಶದ ಅಭಿವೃದ್ಧಿಗೆ ಶ್ರಮಿಸುವ ನಮ್ಮ ಬದ್ಧತೆಯನ್ನು ಪುನರ್ ನವೀಕರಣ ಮಾಡಬೇಕಾಗಿರುವ ಸಂದರ್ಭವಿದು ಎಂದು ರಾಜ್ಯಪಾಲರು ಪ್ರತಿಪಾದಿಸಿದರು.</p>.<p>ಈ ಸಮಾರಂಭದಲ್ಲಿ ಕೆಎಸ್ಆರ್ಪಿ, ಸ್ಕೌಟ್ಸ್-ಗೈಡ್ಸ್, ಎನ್ಸಿಸಿ, ಸೇವಾದಳ, ವಿವಿಧ ಶಾಲಾ ಮಕ್ಕಳನ್ನು ಸೇರಿ 1,750 ಮಂದಿ ಪಥಸಂಚಲನದಲ್ಲಿ ಭಾಗಿಯಾದರು. ಕಿಕ್ಕೇರಿ ಕೃಷ್ಣಮೂರ್ತಿ ದೊಡ್ಡವಾಡ ತಂಡದಿಂದ ನಾಡಗೀತೆ ಮತ್ತು ರೈತಗೀತೆ ಮೊಳಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 71ನೇ ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದರು. </p>.<p>ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲರು ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು.</p>.<p>ಇದೇ ವೇಳೆ ಮಾತನಾಡಿದ ಅವರು, ‘ದೇಶದಾದ್ಯಂತ ಮೂಲಭೂತ ಕರ್ತವ್ಯಗಳ ಕುರಿತು ಆಂದೋಲನಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸಿಕೊಳ್ಳಬೇಕಾಗಿದೆ’ ಎಂದರು.</p>.<p>‘ಪುರುಷರು ಮಹಿಳೆಯರೊಂದಿಗೆ ಗೌರವದಿಂದ ನಡೆದುಕೊಳ್ಳಲು ಶಿಕ್ಷಣದ ಅವಶ್ಯಕತೆ ಇದೆ’ ಎಂದು ವಜುಭಾಯಿ ವಾಲಾ ತಿಳಿಸಿದರು.</p>.<p>‘ಕಳೆದ ಆಗಸ್ಟ್ನಲ್ಲಿ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ನಂತರ, 7 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಸಂಕಷ್ಟಕ್ಕೊಳಗಾದ 2.07 ಲಕ್ಷ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರ ನೀಡಲಾಗಿದೆ’ ಎಂದರು.</p>.<p>ದೇಶದ ಅಭಿವೃದ್ಧಿಗೆ ಶ್ರಮಿಸುವ ನಮ್ಮ ಬದ್ಧತೆಯನ್ನು ಪುನರ್ ನವೀಕರಣ ಮಾಡಬೇಕಾಗಿರುವ ಸಂದರ್ಭವಿದು ಎಂದು ರಾಜ್ಯಪಾಲರು ಪ್ರತಿಪಾದಿಸಿದರು.</p>.<p>ಈ ಸಮಾರಂಭದಲ್ಲಿ ಕೆಎಸ್ಆರ್ಪಿ, ಸ್ಕೌಟ್ಸ್-ಗೈಡ್ಸ್, ಎನ್ಸಿಸಿ, ಸೇವಾದಳ, ವಿವಿಧ ಶಾಲಾ ಮಕ್ಕಳನ್ನು ಸೇರಿ 1,750 ಮಂದಿ ಪಥಸಂಚಲನದಲ್ಲಿ ಭಾಗಿಯಾದರು. ಕಿಕ್ಕೇರಿ ಕೃಷ್ಣಮೂರ್ತಿ ದೊಡ್ಡವಾಡ ತಂಡದಿಂದ ನಾಡಗೀತೆ ಮತ್ತು ರೈತಗೀತೆ ಮೊಳಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>