ಸಂಘ-ಸಂಸ್ಥೆಗಳು ಒಂದೆಡೆ ಧ್ವಜಾರೋಹಣ ಮಾಡಿ, ಸಿಹಿ ಹಂಚಿದರೆ, ಮತ್ತೊಂದೆಡೆ, ವಿಶ್ವವಿದ್ಯಾಲಯಗಳು, ಶಾಲಾ-ಕಾಲೇಜುಗಳು ಭಾನುವಾರ ರಜೆಯಿದ್ದರೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಬಂದು ತಮ್ಮ ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆ ಹಾಡಿ ಗಣರಾಜ್ಯೋತ್ಸವ ಆಚರಿಸಿದರು.ಪೊಲೀಸ್ ಠಾಣೆಗಳು, ಅಂಗಡಿ-ಮುಂಗಟ್ಟುಗಳು, ಕಚೇರಿ ಆವರಣಗಳ ಮುಂದೆ ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಗಳ ಚಿತ್ತಾರ ಆಕರ್ಷಕವಾಗಿತ್ತು.