ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನ ಸುತ್ತಮುತ್ತ ಬಿಗಿ ಭದ್ರತೆ

Last Updated 26 ಜನವರಿ 2020, 3:21 IST
ಅಕ್ಷರ ಗಾತ್ರ

ಬೆಂಗಳೂರು: 71ನೇ ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ ಪಥಸಂಚಲನಕ್ಕೆ ಸಿದ್ದತೆ ನಡೆಸಲಾಗಿದ್ದು, ಮಾಣಿಕ್‌ ಷಾ ಪರೇಡ್‌ ಮೈದಾನದ ಸುತ್ತಮುತ್ತ ಬಿಗಿ ಭದ್ರತೆ ಮಾಡಲಾಗಿದೆ.

ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ, ಕಬ್ಬನ್‌ ರಸ್ತೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸೇರಿದಂತೆ ಮಾಣಿಕ್‌ ಷಾ ಮೈದಾನದ ಸುತ್ತಲಿನ ಪ್ರಮುಖ ಜಾಗಗಳಲ್ಲಿ ಪೊಲೀಸರು ಬೆಳಿಗ್ಗೆಯಿಂದ ತಪಾಸಣೆ ಕೈಗೊಂಡಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ 10:30ರ ವರೆಗೆ ಎಂಜಿ ರಸ್ತೆ, ಕಬ್ಬನ್‌ ರಸ್ತೆ, ಕಾಮರಾಜ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಿಟಿಒ ವೃತ್ತ, ಅನಿಲ್‌ ಕುಂಬ್ಳೆ ವೃತ್ತಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT