ದೇಶದ 30 ರಾಜ್ಯಗಳ ಪೈಕಿ 14 ರಾಜ್ಯಗಳಿಗೆ ಸ್ತಬ್ಧಚಿತ್ರ ರೂಪಿಸಲು ಅವಕಾಶ ದೊರೆತಿದೆ. ಇದರಲ್ಲಿ ಕರ್ನಾಟಕವೂ ಒಂದಾಗಿದೆ. ಸತತ ಎಂಟು ವರ್ಷಗಳಿಂದ ಪರೇಡ್ನಲ್ಲಿ ಭಾಗವಹಿಸುವ ಅವಕಾಶ ದೊರೆತಂತಾಗಿದೆ. ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನವು, ಬೆಳಗಾವಿಯ ಟಿಳಕವಾಡಿಯಲ್ಲಿ 1924ರ ಡಿಸೆಂಬರ್ 26ರಿಂದ ಎರಡು ದಿನಗಳ ಕಾಲ ನಡೆದಿತ್ತು. 30,000ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.