ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಅಸ್ಥಿರತೆ: ಮೂರು ಪಕ್ಷಗಳ ಶಾಸಕರು ರೆಸಾರ್ಟ್‌ ವಾಸ್ತವ್ಯ

Last Updated 12 ಜುಲೈ 2019, 13:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ರಾಜಕೀಯ ಅಸ್ಥಿರತೆ ಉಂಟಾಗಿರುವುದರಿಂದ ಮೂರು ಪಕ್ಷಗಳ ಶಾಸಕರು ರೆಸಾರ್ಟ್‌ ಮತ್ತು ಹೊಟೇಲ್‌ಗಳಲ್ಲಿ ವಾಸ್ತವ್ಯ ಮಾಡಲು ನಿರ್ಧರಿಸಿದ್ದಾರೆ.

ಈಗಾಗಲೇ ಜೆಡಿಎಸ್‌ ಶಾಸಕರು ನಂದಿ ಬೆಟ್ಟದ ಸಮೀಪ ಇರುವ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿದ್ದಾರೆ. ವಿಶ್ವಾಸಮತ ಸಾಬೀತಾಗುವರೆಗೂ ಶಾಸಕರು ಅದೇ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಸಂಜೆ ಬಿಜೆಪಿ ಶಾಸಕರುಯಲಹಂಕದ ರಾಜಾನುಕುಂಟೆ ಸಮೀಪದ ರಮಾಡ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಬಿಜೆಪಿ ಶಾಸಕರನ್ನು ಸಂರ್ಪಕಿಸುತ್ತಾರೆ ಎಂಬ ಭೀತಿ ಇರುವುದರಿಂದ ಮಂಗಳವಾರದವರೆಗೂ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಇನ್ನು ಕಾಂಗ್ರೆಸ್ ಶಾಸಕರು ಯಶವಂತಪುರದ ಪಂಚತಾರ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಇಂದು ರಾತ್ರಿಯೇ ಕಾಂಗ್ರೆಸ್‌ನ ಎಲ್ಲಾ ಶಾಸಕರು ಹೊಟೇಲ್‌ನಲ್ಲಿ ಉಳಿದುಕೊಳ್ಳುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT