ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2008ರಲ್ಲಿ ಸರ್ಕಾರ ರಚಿಸಲು ಬಿಜೆಪಿಯವರಿಗೆ 113 ಶಾಸಕರ ಬಲ ಇರಲಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್ನ ಕೆಲ ಶಾಸಕರನ್ನು ರೆಸಾರ್ಟ್ಗೆ ಕರೆದುಕೊಂಡು ಹೋಗಿ ರಾತ್ರೋರಾತ್ರಿ ರಾಜೀನಾಮೆ ಕೊಡಿಸಿದರು. ಉಪ ಚುನಾವಣೆ ಬಳಿಕ ಅವರನ್ನು ಮಂತ್ರಿ ಮಾಡಿದರು’ ಎಂದು ನೆನಪಿಸಿಕೊಂಡರು.