ಈಗಲ್ಟನ್ ರೆಸಾರ್ಟ್ನ ಹೊರಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆನಂದ್ ಸಿಂಗ್ ಮತ್ತು ಭೀಮಾ ನಾಯ್ಕ ನಡುವಿನ ಮನಸ್ಥಾಪ ಬಗೆಹರಿಸಲು ಮಾತುಕತೆ ನಡೆದಿತ್ತು. ಈ ಸಂದರ್ಭ ಸಣ್ಣ ಘಟನೆ ನಡೆಯಿತು. ಆದರೆ ಮಾಧ್ಯಮಗಳಲ್ಲಿ ಬಂದಿರುವಂತೆ ಬಿಯರ್ ಬಾಟಲಿಯಿಂದ ಹೊಡೆದಿಲ್ಲ. ನನ್ನ ಗನ್ ಮ್ಯಾನ್ಗೂ ಕಚ್ಚಿಲ್ಲ’ ಎಂದರು.