ಬಿಡದಿ: ಈಗಲ್ಟನ್ ರೆಸಾರ್ಟಿನಲ್ಲಿ ಕಾಂಗ್ರೆಸ್ ಶಾಸಕರು ಒಟ್ಟುಗೂಡಿದ್ದು, ಶನಿವಾರಮಧ್ಯಾಹ್ನ 3ಕ್ಕೆ ಸಭೆ ನಿಗದಿಯಾಗಿದೆ.
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿಸಭೆ ನಡೆಯಲಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
'ಇನ್ನೂ ಒಂದಿಬ್ಬರು ಶಾಸಕರು ಮಧ್ಯಾಹ್ನ ಬರುತ್ತಾರೆ. ಅನಂತರ ಎಲ್ಲರು ಒಟ್ಟಿಗೆ ಸೇರಿ ಸಭೆ ನಡೆಸುತ್ತೇವೆ. ಕ್ಷೇತ್ರದಲ್ಲಿ ಕಳೆದ ಏಳು ತಿಂಗಳಿಂದ ಕೆಲಸ ಆಗಿಲ್ಲ. ಸಾಕಷ್ಟು ಅನುದಾನ ಸಿಕ್ಕಿಲ್ಲ ಎಂಬ ಅಸಮಾಧಾನ ಇದೆ. ಎಲ್ಲವನ್ನೂ ಹೇಳಿಕೊಳ್ಳುತ್ತೇವೆ. ಯಾರೂ ಕಾಂಗ್ರೆಸ್ ಬಿಡುವುದಿಲ್ಲ' ಎಂದು ಮಾಲೂರು ಶಾಸಕ ನಂಜೇಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಬೇರೆಯವರಿಗೆ ಅವಕಾಶ ನೀಡುವ ಸಲುವಾಗಿ ರಾಜೀನಾಮೆ ನೀಡಲು ನಮ್ಮ ಸಚಿವರೇ ಸಿದ್ದರಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ' ಎಂದರು.
ತಟ್ಟೆ ಇಡ್ಲಿ ಸವಿ: ಎಲ್ಲ ಶಾಸಕರಿಗೆ ಬೆಳಿಗ್ಗೆ ಉಪಾಹಾರಕ್ಕೆ ಹೋಟೆಲ್ ನ ಖಾದ್ಯಗಳ ಜೊತೆಗೆ ಬಿಡದಿಯ ತಟ್ಟೆ ಇಡ್ಲಿಯನ್ನು ಬಡಿಸಲಾಯಿತು. ಆರು ಬಾಕ್ಸ್ಗಳಲ್ಲಿ ಬಿಡದಿಯಿಂದ ಇಡ್ಲಿಯನ್ನು ತರಿಸಿಕೊಳ್ಳಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.