ರಮೇಶ್ಕುಮಾರ್ ಸ್ಪೀಕರ್ ಸ್ಥಾನದಲ್ಲಿ ಕುಳಿತು ನೀಡಿದ್ದ ತೀರ್ಪನ್ನು ಮತದಾರರು ಅನರ್ಹ ಮಾಡಿದ್ದಾರೆ ಎಂದು ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ‘ನಾನು ಯಾರನ್ನೂ ವೈಯಕ್ತಿಕವಾಗಿ ಅನರ್ಹಗೊಳಿಸಿಲ್ಲ. ಸಂವಿಧಾನಬದ್ಧವಾಗಿ ನಿರ್ಣಯ ಕೈಗೊಂಡಿದ್ದೆ. ಶಿವರಾಮ್ ಹೆಬ್ಬಾರ್ ಅದನ್ನೇ ತಪ್ಪು ಎನ್ನುವುದಾದರೆ ಮತದಾರರು ಚುನಾವಣೆಯಲ್ಲಿ ಸಂವಿಧಾನವನ್ನೇ ಅನರ್ಹಗೊಳಿಸಿದ್ದಾರೆ ಎಂಬ ಅರ್ಥ ಬರುತ್ತದೆ’ ಎಂದರು.