ಲೋಕಸಭೆ, ರಾಜ್ಯಸಭೆ ಮಾದರಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಸರಿಸುತ್ತಿರುವ ಮಾದರಿಯನ್ನೇ ಇಲ್ಲಿ ಅನುಸರಿಸಲಾಗಿದೆ. ಅಲ್ಲಿಯೂ ಖಾಸಗಿ ವಾಹಿನಿಗಳ ಕ್ಯಾಮೆರಾಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಾಧ್ಯಮಗಳಿಗೆ ಕಡಿವಾಣ ಹಾಕುವ ಪ್ರಶ್ನೆಯೇ ಇಲ್ಲ. ಸದನದ ಎಲ್ಲ ಮಾಹಿತಿಗಳೂ ಮಾಧ್ಯಮಗಳಿಗೆ ಸಿಗುತ್ತದೆ. ಯಾವುದನ್ನೂ ಮುಚ್ಚಿಡುವುದಿಲ್ಲ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.