ಕಲಬುರ್ಗಿ ವಲಯದಿಂದ ಗಿರೀಶ ಕಡ್ಲೇವಾಡ,ಗಿರೀಶ ಕಡ್ಲೇವಾಡ, ಬೀದರ್ನ ಅಣದೂರು ಮಹಾರುದ್ರಪ್ಪ, ಪ್ರಕಾಶ ಲಕ್ಕಶೆಟ್ಟಿ, ಯಾದಗಿರಿಯ ಸೂರ್ಯಪ್ರಕಾಶ್ ಘನಾತೆ ಮತ್ತು ಪರಿಶಿಷ್ಟ ಮೀಸಲು ಸ್ಥಾನಕ್ಕೆ ರಾಯಚೂರಿನ ಡಾ.ಕುಂಟೆಪ್ಪ ಗೌರಿಪುರ ಮತ್ತು ಸಂಗಮೇಶ ಹಿರೇಮಠ ಬಣದಿಂದ ದಾನಿ ಬಾಬುರಾವ ಚುನಾಯಿತರಾಗಿದ್ದಾರೆ. ಇದೇ 26 ರಂದು ಬೆಂಗಳೂರಿನಲ್ಲಿ ನಡೆಯುವ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ರಾಜ್ಯ ಚುನಾವಣಾಧಿಕಾರಿ ಸಿ.ಟಿ.ಸರಸ್ವತಿ ತಿಳಿಸಿದರು.