ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಹಣಿ ಲೋಪದೋಷ ಸರಿಪಡಿಸಲು ಕಂದಾಯ ಅದಾಲತ್

Last Updated 16 ಜೂನ್ 2020, 11:52 IST
ಅಕ್ಷರ ಗಾತ್ರ

ಬೆಂಗಳೂರು: ಗಣಕೀಕೃತ ಪಹಣಿಗಳಲ್ಲಿ ಇರುವ ಲೋಪದೋಷ ಸರಿಪಡಿಸಲು ಕಂದಾಯ ಇಲಾಖೆಯು ‘ಕಂದಾಯ ಅದಾಲತ್‌’ ನಡೆಸಲು ತೀರ್ಮಾನಿಸಿದೆ.

ದಕ್ಷಿಣಕನ್ನಡ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಂದಾಯ ಅದಾಲತ್‌ ನಡೆಸಲಾಗುವುದು. ಇದಕ್ಕಾಗಿ ಕಂದಾಯ ಇಲಾಖೆ ಮಾರ್ಗಸೂಚಿಯನ್ನೂ ಹೊರಡಿಸಿದೆ.

ಕಂದಾಯತ್‌ ಅದಾಲತ್‌ ನಡೆಸಲು ಇಲಾಖೆ ಸಿಬ್ಬಂದಿಯನ್ನೇ ಬಳಸಿಕೊಳ್ಳಬೇಕು. ಈ ಹಿಂದೆ ಜಿಲ್ಲೆಗೆ ಇಬ್ಬರು ನಿವೃತ್ತ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸೂಚನೆ ನೀಡಲಾಗಿತ್ತು. ಈಗ ಅದರ ಅಗತ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಿದ್ದುಪಡಿಗಾಗಿ ಬಾಕಿ ಇರುವ ಮತ್ತು ಸ್ವೀಕೃತವಾಗುವ ಅರ್ಜಿಗಳನ್ನು 2020 ರ ಡಿಸೆಂಬರ್‌ 31 ರೊಳಗೆ ಪೂರ್ಣಗೊಳಿಸಬೇಕು. ಅದನ್ನು ಮುಂದುವರಿಸುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT