ಕಲಬುರ್ಗಿ: ಅಕ್ರಮವಾಗಿ ಪಡಿತರ ಅಕ್ಕಿ ಹಾಗೂ ಗೋಧಿಯನ್ನು ದಾಸ್ತಾನು ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡಲು ನಗರದ ಕಪನೂರ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀ ರಾಮಲಿಂಗೇಶ್ವರ ದಾಲ್ ಮತ್ತು ಪ್ಲೋರ್ ಮಿಲ್ನಲ್ಲಿ ಸಂಗ್ರಹಿಸಿಟ್ಟಿದ್ದ 187 ಕ್ವಿಂಟಲ್ ಅಕ್ಕಿ, 72 ಕ್ವಿಂಟಲ್ ಗೋಧಿ, 36 ಕ್ಷೀರ ಭಾಗ್ಯ ಹಾಲಿನ ಪೌಡರ್ ಪಾಕೇಟ್, ಎರಡು ತೂಕದ ಯಂತ್ರ ಹಾಗೂ ಆಹಾರ ಸಾಮಗ್ರಿಗಳನ್ನು ಸಾಗಿಸಲು ಬಳಸುತ್ತಿದ್ದ ಟಾಟಾ 407 ಟೆಂಪೊ ವಾಹನವನ್ನು ವಶಪಡಿಸಿಕೊಂಡು ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.