ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಲಕ್ಷ್ಮಿ, ‘ವಿಮಾನನಿಲ್ದಾಣ ಹಾಗೂ ಸುವರ್ಣ ವಿಧಾನಸೌಧ ಎರಡೂ ನನ್ನ ಗ್ರಾಮೀಣ ಕ್ಷೇತ್ರದಲ್ಲಿವೆ. ಹೀಗಾಗಿ, ಮುಖ್ಯಮಂತ್ರಿಯನ್ನು ಸ್ವಾಗತಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಬೇರೆಯವರು ಏಕೆ ಬಂದಿಲ್ಲವೋ ನನಗೆ ಗೊತ್ತಿಲ್ಲ. ನಾನೇನು ರಮೇಶ ಜಾರಕಿಹೊಳಿ ಅವರ ಪಿಆರ್ಒ ಅಲ್ಲ. ಏಕೆ ಬಂದಿಲ್ಲ ಎನ್ನುವುದನ್ನು ಅವರನ್ನೇ ಕೇಳಿ’ ಎಂದು ಪ್ರತಿಕ್ರಿಯಿಸಿದರು.