ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಚಾಕುವಿನಿಂದ ಇರಿದು ನೈಜೀರಿಯಾ ಪ್ರಜೆ ಕೊಲೆ

ಬೆಂಗಳೂರು: ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ನೈಜೀರಿಯಾ ಪ್ರಜೆ ಜಾನ್ ಸನ್ಡೇ (30) ಎಂಬುವರನ್ನು ಕೊಲೆ ಮಾಡಲಾಗಿದೆ.
'ಕಾಚರಕನಹಳ್ಳಿಯಲ್ಲಿ ವಾಸವಿದ್ದ ಜಾನ್ ಹಾಗೂ ಆತನ ಪರಿಚಯಸ್ಥ ಮನೋಜ್ ನಡುವೆ ಗಲಾಟೆ ಆಗಿತ್ತು. ಇದೇ ವೇಳೆಯೇ ಮನೋಜ್, ಚಾಕುವಿನಿಂದ ಇರಿದು ಜಾನ್ ಅವರನ್ನು ಕೊಂದಿದ್ದಾನೆ' ಎಂದು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.
'ಕ್ಷುಲ್ಲಕ ಕಾರಣಕ್ಕೆ ಈ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ಮನೋಜ್ನಿಗೂ ಗಾಯಗಳಾಗಿವೆ' ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.