ಬೆಳಗಾವಿ: ಹೊರವಲಯದ ಶ್ರೀನಗರ ಬಳಿಯ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ ಐವರು ಮೃತಪಟ್ಟರು.
ಮೃತರನ್ನು ಔರಂಗಾಬಾದ್ ದೇವಗಿರಿಯ ನಿವಾಸಿಗಳು ಎನ್ನಲಾದ ನಂದು ಪವಾರ್, ಅಮೂಲ ನಾವಿ, ಸುರೇಶ್ ಕಾನೇರಿ, ಅಮೂಲ ಚೌರಿ, ಮಹೇಶ್ ಚೌರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೊಲ್ಹಾಪುರದಿಂದ ಗೋವಾಕ್ಕೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ.
ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ಕುಮಾರ್, ಡಿಸಿಪಿ ಯಶೋದಾ ಒಂಟಗೋಡಿ, ಎಸಿಪಿ ಎನ್.ವಿ. ಭರಮನಿ ಭೇಟಿ ನೀಡಿ ಪರಿಶೀಲಿಸಿದರು.